ಸುದ್ದಿಗಾರರ ಜತೆಗೆ ಮಾತನಾಡಿದ ಸಚಿವ ಅಮನ್ ಅರೋರಾ, ‘ಪಂಜಾಬ್ಸರ್ಕಾರವು ಯಾವುದೇ ಸಂಘರ್ಷವನ್ನು ಬಯಸುವುದಿಲ್ಲ. ಆದರೆ, ಯಾರಾದರೂ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದರೆ ಅದನ್ನು ಆಡಳಿತ ಪಕ್ಷವು ಒಪ್ಪಿಕೊಳ್ಳುವುದಿಲ್ಲ. ‘ಆಪರೇಷನ್ ಕಮಲ’ವನ್ನು ಯಶಸ್ವಿಗೊಳಿಸುವ ಸಲುವಾಗಿಯೇ ಕೇಂದ್ರದ ನಿರ್ದೇಶನದ ಮೇರೆಗೆ ಸೆ. 22ರಂದು ನಿಗದಿಯಾಗಿದ್ದ ವಿಶೇಷ ಅಧಿವೇಶನವನ್ನು ರಾಜ್ಯಪಾಲರು ರದ್ದುಗೊಳಿಸಿದ್ದಾರೆ’ ಎಂದು ಆರೋಪಿಸಿದರು.