ವಿರೋಧ ಪಕ್ಷದ ನಾಯಕ ಪರ್ತಪ್ ಸಿಂಗ್ ಬಾಜ್ವಾ, ಕಾಂಗ್ರೆಸ್ ನಾಯಕ ಸುಖ್ಪಾಲ್ ಸಿಂಗ್ ಖೈರಾ, ಪಂಜಾಬ್ ಬಿಜೆಪಿ ಅಧ್ಯಕ್ಷ ಅಶ್ವನಿ ಶರ್ಮಾ, ಆಡಳಿತಾರೂಢ ಎಎಪಿ ಪಕ್ಷ ಪರವಾಗಿ ಕರೆದಿರುವ ವಿಶೇಷ ಅಧಿವೇಶನಕ್ಕೆ ಅನುಮತಿ ನಿರಾಕರಿಸುವಂತೆ ರಾಜ್ಯಪಾಲರನ್ನು ಕೋರಿದ್ದರು.
ಬಿಜೆಪಿಯು ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ವಿಶ್ವಾಸಮತ ಸಾಬೀತುಪಡಿಸಲು ಸೆಪ್ಟೆಂಬರ್ 22ರಂದು ವಿಶೇಷ ವಿಧಾನಸಭಾ ಅಧಿವೇಶನ ಕರೆದಿದ್ದರು.
ಎಎಪಿ ಶಾಸಕರಿಗೆ ಬಿಜೆಪಿ ₹25 ಕೋಟಿ ಆಮಿಷವೊಡ್ಡಿ ತನ್ನತ್ತ ಸೆಳೆದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿತ್ತು.