‘ದೇವಿದಾಸಪುರದಲ್ಲಿ ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದೇವೆ. ಮುಂಜಾನೆ ಪ್ರಾರ್ಥನೆ ಸಲ್ಲಿಸಿ ಧರಣಿ ಕುಳಿತುಕೊಳ್ಳುತ್ತೇವೆ. ಸೆಪ್ಟೆಂಬರ್ 29ರ ವರೆಗೂ ಇದು ಮುಂದುವರಿಯಲಿದೆ. ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಿದೆ. ಮೋದಿ ಸರ್ಕಾರದ ಅಪಾಯಕರ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಿದ್ದಾರೆ’ ಎಂದು ‘ಕಿಸಾನ್ ಸಂಘರ್ಷ್ ಕಮಿಟಿ’ಯ ಕಾರ್ಯದರ್ಶಿ ಗುರುಚರಣ್ ಸಿಂಗ್ ಛಬ್ಬಾ ಹೇಳಿದ್ದಾರೆ.