<p><strong>ನವದೆಹಲಿ</strong>: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಲೋಪದ ಕುರಿತು ವ್ಯಂಗ್ಯವಾಡಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸಿ ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ಕಾಯಬೇಕಾಯಿತು. ಕೇವಲ 15 ನಿಮಿಷ ಕಾದಿದ್ದಕ್ಕೆ ಪ್ರಧಾನಿಗೆ ‘ತೊಂದರೆ’ ಆಗಿದೆ ಎಂದು ಟೀಕಿಸಿದ್ದಾರೆ. ಸಿಧು ಹೇಳಿಕೆ ಕುರಿತು ಸುದ್ದಿಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.</p>.<p>‘ನಾನು ಪ್ರಧಾನಿಯವರನ್ನು ಕೇಳಲು ಬಯಸುತ್ತೇನೆ. ನಮ್ಮ ರೈತ ಸಹೋದರರು ದೆಹಲಿಯ ಗಡಿಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಅವರು ಒಂದೂವರೆ ವರ್ಷ ಅಲ್ಲಿಯೇ ಇದ್ದರು. ಈ ಬಗ್ಗೆ ನಿಮ್ಮ ಮಾಧ್ಯಮಗಳು ಏನನ್ನೂ ಹೇಳಲಿಲ್ಲವೇಕೆ’ ಎಂದು ಸಿಧು ಪ್ರಶ್ನಿಸಿದ್ದಾರೆ.</p>.<p>ಪಂಜಾಬ್ನ ಫಿರೋಜ್ಪುರದಲ್ಲಿ ಪ್ರಮುಖ ಭದ್ರತಾ ಲೋಪವಾಗಿತ್ತು. ಆ ಕಾರಣ ಮೋದಿ ಹಾಗೂ ಅವರ ಬೆಂಗಾವಲು ಪಡೆ ಫ್ಲೈಓವರ್ನಲ್ಲಿ ಸಿಲುಕಿಕೊಂಡಿತ್ತು. ಬಳಿಕ, ರ್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪ್ರಧಾನಿ ಪಂಜಾಬ್ನಿಂದ ಮರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಲೋಪದ ಕುರಿತು ವ್ಯಂಗ್ಯವಾಡಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸಿ ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ಕಾಯಬೇಕಾಯಿತು. ಕೇವಲ 15 ನಿಮಿಷ ಕಾದಿದ್ದಕ್ಕೆ ಪ್ರಧಾನಿಗೆ ‘ತೊಂದರೆ’ ಆಗಿದೆ ಎಂದು ಟೀಕಿಸಿದ್ದಾರೆ. ಸಿಧು ಹೇಳಿಕೆ ಕುರಿತು ಸುದ್ದಿಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.</p>.<p>‘ನಾನು ಪ್ರಧಾನಿಯವರನ್ನು ಕೇಳಲು ಬಯಸುತ್ತೇನೆ. ನಮ್ಮ ರೈತ ಸಹೋದರರು ದೆಹಲಿಯ ಗಡಿಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಅವರು ಒಂದೂವರೆ ವರ್ಷ ಅಲ್ಲಿಯೇ ಇದ್ದರು. ಈ ಬಗ್ಗೆ ನಿಮ್ಮ ಮಾಧ್ಯಮಗಳು ಏನನ್ನೂ ಹೇಳಲಿಲ್ಲವೇಕೆ’ ಎಂದು ಸಿಧು ಪ್ರಶ್ನಿಸಿದ್ದಾರೆ.</p>.<p>ಪಂಜಾಬ್ನ ಫಿರೋಜ್ಪುರದಲ್ಲಿ ಪ್ರಮುಖ ಭದ್ರತಾ ಲೋಪವಾಗಿತ್ತು. ಆ ಕಾರಣ ಮೋದಿ ಹಾಗೂ ಅವರ ಬೆಂಗಾವಲು ಪಡೆ ಫ್ಲೈಓವರ್ನಲ್ಲಿ ಸಿಲುಕಿಕೊಂಡಿತ್ತು. ಬಳಿಕ, ರ್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪ್ರಧಾನಿ ಪಂಜಾಬ್ನಿಂದ ಮರಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>