<p><strong>ನವದೆಹಲಿ:</strong> ಕಾಂಗ್ರೆಸ್ ನೇತೃತ್ವದ ಸರ್ಕಾರವಿರುವ ಪಂಜಾಬ್, ರಾಜಸ್ಥಾನ ಮತ್ತು ಛತ್ತೀಸಗಡ ರಾಜ್ಯಗಳುಕೋವಿಡ್-19 ಲಸಿಕೆ ಪೂರೈಕೆ ಕೊರತೆಯಿದೆ ಎಂದು ಹೇಳಿಕೊಂಡಿವೆ.ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳೂ ಹೆಚ್ಚಿನ ಲಸಿಕೆ ಒದಗಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿವೆ.</p>.<p>ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ತಮ್ಮ ಪಕ್ಷ ಆಡಳಿತದಲ್ಲಿರುವ ಮತ್ತು ಆಡಳಿತದಲ್ಲಿರುವ ಬೇರೆಪಕ್ಷಗಳನ್ನು ಬೆಂಬಲಿಸಿರುವರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಸಭೆ ನಡೆಸಿದರು.</p>.<p>ಈ ವೇಳೆ ಮಾತನಾಡಿದಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು, ʼಇನ್ನು ಐದು ದಿನಗಳಿಗೆ ಸಾಕಾಗುವಷ್ಟು ಲಸಿಕೆ (5.7 ಲಕ್ಷ ಡೋಸ್) ರಾಜ್ಯದಲ್ಲಿ ಇದೆ. ನಿತ್ಯ 85000-90000 ಜನರಿಗೆ ಲಸಿಕ ನೀಡಲಾಗುತ್ತಿದೆ. ರಾಜ್ಯವು2 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ತಲುಪಲು ಸಾಧ್ಯವಾದರೆ, ಸದ್ಯ ಇರುವ ಲಸಿಕೆ ಮೂರು ದಿನಗಳಲ್ಲಿ ಮುಗಿಯುತ್ತದೆʼ ಎಂದು ಹೇಳಿದ್ದಾರೆ.ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿರುವುದಾಗಿಯೂ ಅವರು ತಿಳಿಸಿದ್ದಾರೆ.</p>.<p>ಸಭೆ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲಸಿಕೆ ಕೊರತೆ ವಾಸ್ತವವಾಗಿದೆ. ಕೇಂದ್ರ ಸರ್ಕಾರವು ರಾಜ್ಯಗಳನ್ನು ಮಧ್ಯಸ್ಥಗಾರರನ್ನಾಗಿ ತೆಗೆದುಕೊಳ್ಳಬೇಕೇ ಹೊರತು ವಿರೋಧಿಗಳನ್ನಾಗಿ ನೋಡಬಾರದು ಎಂದು ಸಲಹೆ ನೀಡಿದ್ದಾರೆ.</p>.<p>ರಾಜ್ಯ ಸರ್ಕಾರಗಳು ಗರಿಷ್ಠ ಸಂಖ್ಯೆಯಲ್ಲಿ ಜನರಿಗೆ ಲಸಿಕೆ ವಿತರಿಸಲು ಗುರಿ ಇಟ್ಟುಕೊಂಡಿವೆ. ರಾಜ್ಯದಲ್ಲಿರುವ ಲಸಿಕೆಯು ಇನ್ನೆರಡು ದಿನಗಳಲ್ಲಿ ಮುಗಿಯಲಿದ್ದು, ಮತ್ತಷ್ಟು ಪೂರೈಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.</p>.<p>ಒಡಿಶಾ ಮುಖ್ಯಮಂತ್ರಿ ಬಿಜಯ್ ಪಣಿಗ್ರಹಿ ಮತ್ತು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೂ ಇನ್ನೆರಡು ದಿನಗಳಿಗೆ ಆಗುವಷ್ಟು ಲಸಿಕೆ ಮಾತ್ರವೇ ರಾಜ್ಯದಲ್ಲಿದೆ ಎಂದಿದ್ದಾರೆ.</p>.<p>ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರು25 ಲಕ್ಷ ಡೋಸ್ನಷ್ಟು ಲಸಿಕೆ ಪೂರೈಸುವಂತೆ ಪ್ರಧಾನಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.</p>.<p>ಸಭೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಆರೋಗ್ಯ ಸಚಿವರೂ ಲಸಿಕೆ ಕೊರತೆಯ ಬಗ್ಗೆ ವಿವರಿಸಿದ್ದಾರೆ. ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪ್, ಕೇಂದ್ರವು ಪ್ರತಿವಾರ 40 ಲಕ್ಷ ಡೋಸ್ ಲಸಿಕೆ ಪೂರೈಸಬೇಕು ಎಂದು ಕೋರಿದ್ದಾರೆ.</p>.<div class="content"><p>ಭಾರತದಲ್ಲಿಜನವರಿ 16 ರಂದು ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಮಾರ್ಚ್ 1 ರಂದು ಎರಡನೇ ಹಂತ ಮತ್ತು ಏಪ್ರಿಲ್ 1 ರಂದು ಮೂರನೇ ಹಂತದಲ್ಲಿ45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನೇತೃತ್ವದ ಸರ್ಕಾರವಿರುವ ಪಂಜಾಬ್, ರಾಜಸ್ಥಾನ ಮತ್ತು ಛತ್ತೀಸಗಡ ರಾಜ್ಯಗಳುಕೋವಿಡ್-19 ಲಸಿಕೆ ಪೂರೈಕೆ ಕೊರತೆಯಿದೆ ಎಂದು ಹೇಳಿಕೊಂಡಿವೆ.ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳೂ ಹೆಚ್ಚಿನ ಲಸಿಕೆ ಒದಗಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿವೆ.</p>.<p>ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು, ತಮ್ಮ ಪಕ್ಷ ಆಡಳಿತದಲ್ಲಿರುವ ಮತ್ತು ಆಡಳಿತದಲ್ಲಿರುವ ಬೇರೆಪಕ್ಷಗಳನ್ನು ಬೆಂಬಲಿಸಿರುವರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಸಭೆ ನಡೆಸಿದರು.</p>.<p>ಈ ವೇಳೆ ಮಾತನಾಡಿದಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು, ʼಇನ್ನು ಐದು ದಿನಗಳಿಗೆ ಸಾಕಾಗುವಷ್ಟು ಲಸಿಕೆ (5.7 ಲಕ್ಷ ಡೋಸ್) ರಾಜ್ಯದಲ್ಲಿ ಇದೆ. ನಿತ್ಯ 85000-90000 ಜನರಿಗೆ ಲಸಿಕ ನೀಡಲಾಗುತ್ತಿದೆ. ರಾಜ್ಯವು2 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ತಲುಪಲು ಸಾಧ್ಯವಾದರೆ, ಸದ್ಯ ಇರುವ ಲಸಿಕೆ ಮೂರು ದಿನಗಳಲ್ಲಿ ಮುಗಿಯುತ್ತದೆʼ ಎಂದು ಹೇಳಿದ್ದಾರೆ.ಈ ಸಂಬಂಧ ಪ್ರಧಾನಿಗೆ ಪತ್ರ ಬರೆದಿರುವುದಾಗಿಯೂ ಅವರು ತಿಳಿಸಿದ್ದಾರೆ.</p>.<p>ಸಭೆ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲಸಿಕೆ ಕೊರತೆ ವಾಸ್ತವವಾಗಿದೆ. ಕೇಂದ್ರ ಸರ್ಕಾರವು ರಾಜ್ಯಗಳನ್ನು ಮಧ್ಯಸ್ಥಗಾರರನ್ನಾಗಿ ತೆಗೆದುಕೊಳ್ಳಬೇಕೇ ಹೊರತು ವಿರೋಧಿಗಳನ್ನಾಗಿ ನೋಡಬಾರದು ಎಂದು ಸಲಹೆ ನೀಡಿದ್ದಾರೆ.</p>.<p>ರಾಜ್ಯ ಸರ್ಕಾರಗಳು ಗರಿಷ್ಠ ಸಂಖ್ಯೆಯಲ್ಲಿ ಜನರಿಗೆ ಲಸಿಕೆ ವಿತರಿಸಲು ಗುರಿ ಇಟ್ಟುಕೊಂಡಿವೆ. ರಾಜ್ಯದಲ್ಲಿರುವ ಲಸಿಕೆಯು ಇನ್ನೆರಡು ದಿನಗಳಲ್ಲಿ ಮುಗಿಯಲಿದ್ದು, ಮತ್ತಷ್ಟು ಪೂರೈಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.</p>.<p>ಒಡಿಶಾ ಮುಖ್ಯಮಂತ್ರಿ ಬಿಜಯ್ ಪಣಿಗ್ರಹಿ ಮತ್ತು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೂ ಇನ್ನೆರಡು ದಿನಗಳಿಗೆ ಆಗುವಷ್ಟು ಲಸಿಕೆ ಮಾತ್ರವೇ ರಾಜ್ಯದಲ್ಲಿದೆ ಎಂದಿದ್ದಾರೆ.</p>.<p>ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರು25 ಲಕ್ಷ ಡೋಸ್ನಷ್ಟು ಲಸಿಕೆ ಪೂರೈಸುವಂತೆ ಪ್ರಧಾನಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.</p>.<p>ಸಭೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಆರೋಗ್ಯ ಸಚಿವರೂ ಲಸಿಕೆ ಕೊರತೆಯ ಬಗ್ಗೆ ವಿವರಿಸಿದ್ದಾರೆ. ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪ್, ಕೇಂದ್ರವು ಪ್ರತಿವಾರ 40 ಲಕ್ಷ ಡೋಸ್ ಲಸಿಕೆ ಪೂರೈಸಬೇಕು ಎಂದು ಕೋರಿದ್ದಾರೆ.</p>.<div class="content"><p>ಭಾರತದಲ್ಲಿಜನವರಿ 16 ರಂದು ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಮಾರ್ಚ್ 1 ರಂದು ಎರಡನೇ ಹಂತ ಮತ್ತು ಏಪ್ರಿಲ್ 1 ರಂದು ಮೂರನೇ ಹಂತದಲ್ಲಿ45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.</p></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>