ಪಂಜಾಬ್ನ ಬತಿಂಡ ಗ್ರಾಮದಲ್ಲಿ ಇಂತಹದೊಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸರಪಂಚ್ ಮಂಜಿತ್ ಕೌರ್, ಪ್ರತಿಭಟನೆಗೆ ಹೋಗದವರ ವಿರುದ್ಧ 1500 ರೂ.ಗಳ ದಂಡ ವಿಧಿಸಲಾಗುವುದು. ದಂಡ ಪಾವತಿಸದಿದ್ದರೆ ಬಹಿಷ್ಕಾರ ಹಾಕಲಾಗುವುದು. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಲು ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದರು.