ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪು ಕೋಟೆ ಹಿಂಸಾಚಾರದ ಆರೋಪಿ, ಪಂಜಾಬಿ ನಟ ದೀಪ್‌ ಸಿಧು ಅಪಘಾತದಲ್ಲಿ ಸಾವು

Last Updated 15 ಫೆಬ್ರುವರಿ 2022, 17:15 IST
ಅಕ್ಷರ ಗಾತ್ರ

ಸೋನಿಪತ್‌: ದೆಹಲಿಯ ಕೆಂಪು ಕೋಟೆಯಲ್ಲಿ 2021ರಲ್ಲಿ ನಡೆದ ಹಿಂಸಾಚಾರ ಘಟನೆಯ ಆರೋಪಿ, ಪಂಜಾಬಿ ನಟ ಮತ್ತು ಹೋರಾಟಗಾರ ದೀಪ್‌ ಸಿಧು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ಹರಿಯಾಣದ ಸೋನಿಪತ್‌ನ ಪಿಪ್ಲಿ ಟೋಲ್‌ ಸಮೀಪ ದೀಪ್‌ ಸಿಧು ಅವರ ಕಾರು ನಿಂತಿದ್ದ ಟ್ರಕ್‌ಗೆ ಗುದ್ದಿದೆ. ಆ ಅಪಘಾತದಲ್ಲಿ ದೀಪ್‌ ಸಿಧು ಮೃತಪಟ್ಟಿರುವುದಾಗಿ ಸೋನಿಪತ್‌ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಗಣರಾಜ್ಯೋತ್ಸವದ ದಿನದಂದು ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್‌ ರ್‍ಯಾಲಿಯಲ್ಲಿ ಪ್ರತಿಭಟನಾಕಾರರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದ ಆರೋಪದ ಮೇಲೆ ಕಳೆದ ವರ್ಷ ಫೆಬ್ರುವರಿ 9ರಂದು ದೀಪ್‌ ಸಿಧು ಅವರನ್ನು ಬಂಧಿಸಲಾಗಿತ್ತು.

ಟ್ರ್ಯಾಕ್ಟರ್‌ ರ್‍ಯಾಲಿಯು ಹಿಂಸಾಚಾರಕ್ಕೆ ತಿರುಗಿ, ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಉರುಳಿಸಿದ್ದರು ಹಾಗೂ ಪೊಲೀಸರೊಂದಿಗೆ ಘರ್ಷಣೆ ನಡೆದಿತ್ತು. ನೂರಾರು ಮಂದಿ ಕೆಂಪು ಕೋಟೆಗೆ ನುಗ್ಗಿದ್ದರು ಹಾಗೂ ಆಸ್ತಿಗಳಿಗೆ ಹಾನಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT