<p><strong>ಪುರಿ(ಒಡಿಶಾ): </strong>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ. ರಮಣ ಅವರು ಇಲ್ಲಿನ ಪ್ರಸಿದ್ಧ ಜಗನ್ನಾಥ ದೇವಾಲಯಕ್ಕೆ ಶನಿವಾರ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.</p>.<p>ನಂತರ, ಅವರು ಕಟಕ್ನಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಎಂದು ಮೂಲಗಳು ತಿಳಿಸಿವೆ.</p>.<p>ಎರಡು ದಿನಗಳ ಪ್ರವಾಸಕ್ಕಾಗಿ ಒಡಿಶಾಗೆ ಭೇಟಿ ನೀಡಿದ್ದ ಸಿಜೆಐ ಅವರನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಕಾರ್ಯದರ್ಶಿ ವಿ.ಕೆ. ಪಾಂಡ್ಯನ್, ದೇವಾಲಯದ ಮುಖ್ಯ ಆಡಳಿತಾಧಿಕಾರಿ ಕೃಷ್ಣ ಕುಮಾರ್, ಜಿಲ್ಲಾಧಿಕಾರಿ ಸಮರ್ಥ ವರ್ಮಾ ಸ್ವಾಗತಿಸಿದರು.</p>.<p>ಆಡಳಿತ ಮಂಡಳಿಯವರು ಕೈಗೊಂಡಿರುವ ದೇವಾಲಯದ ಸೌಂದರ್ಯೀಕರಣ ಕಾರ್ಯಕ್ಕೆ ಸಿಜೆಐ ಮೆಚ್ಚುಗೆ ವ್ಯಕ್ತಪಡಿಸಿದ್ದಾಗಿ ದೇವಾಲಯದ ಅರ್ಚಕರೊಬ್ಬರು ತಿಳಿಸಿದರು.</p>.<p>ಒಡಿಶಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್. ಮುರಳೀಧರ್, ಭಾರತೀಯ ಪುರಾತತ್ವ ಸರ್ವೇಕ್ಷಣಾಧಿಕಾರಿ (ಒಡಿಶಾ ವೃತ್ತ) ಅರುಣ್ ಕುಮಾರ್ ಮಲ್ಲಿಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುರಿ(ಒಡಿಶಾ): </strong>ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ. ರಮಣ ಅವರು ಇಲ್ಲಿನ ಪ್ರಸಿದ್ಧ ಜಗನ್ನಾಥ ದೇವಾಲಯಕ್ಕೆ ಶನಿವಾರ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.</p>.<p>ನಂತರ, ಅವರು ಕಟಕ್ನಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಎಂದು ಮೂಲಗಳು ತಿಳಿಸಿವೆ.</p>.<p>ಎರಡು ದಿನಗಳ ಪ್ರವಾಸಕ್ಕಾಗಿ ಒಡಿಶಾಗೆ ಭೇಟಿ ನೀಡಿದ್ದ ಸಿಜೆಐ ಅವರನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆಪ್ತ ಕಾರ್ಯದರ್ಶಿ ವಿ.ಕೆ. ಪಾಂಡ್ಯನ್, ದೇವಾಲಯದ ಮುಖ್ಯ ಆಡಳಿತಾಧಿಕಾರಿ ಕೃಷ್ಣ ಕುಮಾರ್, ಜಿಲ್ಲಾಧಿಕಾರಿ ಸಮರ್ಥ ವರ್ಮಾ ಸ್ವಾಗತಿಸಿದರು.</p>.<p>ಆಡಳಿತ ಮಂಡಳಿಯವರು ಕೈಗೊಂಡಿರುವ ದೇವಾಲಯದ ಸೌಂದರ್ಯೀಕರಣ ಕಾರ್ಯಕ್ಕೆ ಸಿಜೆಐ ಮೆಚ್ಚುಗೆ ವ್ಯಕ್ತಪಡಿಸಿದ್ದಾಗಿ ದೇವಾಲಯದ ಅರ್ಚಕರೊಬ್ಬರು ತಿಳಿಸಿದರು.</p>.<p>ಒಡಿಶಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್. ಮುರಳೀಧರ್, ಭಾರತೀಯ ಪುರಾತತ್ವ ಸರ್ವೇಕ್ಷಣಾಧಿಕಾರಿ (ಒಡಿಶಾ ವೃತ್ತ) ಅರುಣ್ ಕುಮಾರ್ ಮಲ್ಲಿಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>