ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಧಾಮಿ ಅವರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿತ್ತು. ಫೆಬ್ರುವರಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಧಾಮಿ ಅವರು ಸೋಲು ಅನುಭವಿಸಿದ್ದರು. ಸೋತಿದ್ದರೂ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಅವರು, ಆರು ತಿಂಗಳ ಒಳಗಾಗಿ ಶಾಸನಸಭೆಗೆ ಆಯ್ಕೆಯಾಗಬೇಕಿತ್ತು.