<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದುರಂಹಕಾರವನ್ನು ಬಿಟ್ಟು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಡಿಕೆ ಮುಂದಿರಿಸಿದ್ದಾರೆ.</p>.<p>ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರತಿಭಟನೆ ನಡೆಸುತ್ತಿರುವ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ಕೇಂದ್ರ ಸರ್ಕಾರ ಮನಗಾಣಬೇಕಿದೆ ಎಂದು ಹೇಳಿದರು.</p>.<p>ರೈತರು ಅಕ್ಟೋಬರ್ನಲ್ಲಿ ಗಾಂಧಿ ಜಯಂತಿ ತನಕ ಅಂದೋಲನ ನಡೆಸುವುದಾಗಿ ತಿಳಿಸಿದ್ದಾರೆ. ಮೋದಿ ಸರ್ಕಾರದ ಮೇಲಿನ ನಂಬಿಕೆ ಸಂಪೂರ್ಣ ನಷ್ಟವಾಗಿದೆ ಎಂಬುದೇ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.</p>.<p>ಇದನ್ನೂ ಓದಿ:</p>.<p>ಗಾಂಧಿ ಜಯಂತಿ ವರೆಗೆ ಪ್ರತಿಭಟನೆ ಮುಂದುವರಿಸಲು ರೈತರು ದೃಢ ಸಂಕಲ್ಪ ಕೈಗೊಂಡಿದ್ದಾರೆ. ಇದು ಮೋದಿ ಸರ್ಕಾರದ ವಿರುದ್ಧ ರೈತರು ಎಷ್ಟು ಹತಾಶೆಗೊಂಡಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.</p>.<p>ಕಳೆದ ವರ್ಷ ನವೆಂಬರ್ 26ರಿಂದಲೇ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಇದುವರೆಗೆ ಬಿಕ್ಕಟ್ಟು ಇತ್ಯರ್ಥ್ಯಗೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದುರಂಹಕಾರವನ್ನು ಬಿಟ್ಟು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಡಿಕೆ ಮುಂದಿರಿಸಿದ್ದಾರೆ.</p>.<p>ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರತಿಭಟನೆ ನಡೆಸುತ್ತಿರುವ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ಕೇಂದ್ರ ಸರ್ಕಾರ ಮನಗಾಣಬೇಕಿದೆ ಎಂದು ಹೇಳಿದರು.</p>.<p>ರೈತರು ಅಕ್ಟೋಬರ್ನಲ್ಲಿ ಗಾಂಧಿ ಜಯಂತಿ ತನಕ ಅಂದೋಲನ ನಡೆಸುವುದಾಗಿ ತಿಳಿಸಿದ್ದಾರೆ. ಮೋದಿ ಸರ್ಕಾರದ ಮೇಲಿನ ನಂಬಿಕೆ ಸಂಪೂರ್ಣ ನಷ್ಟವಾಗಿದೆ ಎಂಬುದೇ ಇದರಿಂದಲೇ ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.</p>.<p>ಇದನ್ನೂ ಓದಿ:</p>.<p>ಗಾಂಧಿ ಜಯಂತಿ ವರೆಗೆ ಪ್ರತಿಭಟನೆ ಮುಂದುವರಿಸಲು ರೈತರು ದೃಢ ಸಂಕಲ್ಪ ಕೈಗೊಂಡಿದ್ದಾರೆ. ಇದು ಮೋದಿ ಸರ್ಕಾರದ ವಿರುದ್ಧ ರೈತರು ಎಷ್ಟು ಹತಾಶೆಗೊಂಡಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದರು.</p>.<p>ಕಳೆದ ವರ್ಷ ನವೆಂಬರ್ 26ರಿಂದಲೇ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಇದುವರೆಗೆ ಬಿಕ್ಕಟ್ಟು ಇತ್ಯರ್ಥ್ಯಗೊಂಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>