<p class="title"><strong>ರಾಯಪುರ: </strong>ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 76ರಷ್ಟು ಮೀಸಲಾತಿ ಏರಿಕೆ ಮಾಡುವಛತ್ತೀಸಗಢ ಸರ್ಕಾರದ ಕ್ರಮವು ರಾಜಕೀಯ ಪ್ರೇರಿತವಾಗಿದ್ದು, ಇದು ನ್ಯಾಯಾಲಯದಲ್ಲಿ ನಿಲ್ಲದು ಎಂದು ರಾಜಕೀಯ ಹಾಗೂ ಕಾನೂನು ತಜ್ಞರು ವಿಶ್ಲೇಷಿಸಿದ್ದಾರೆ.</p>.<p class="title">ಛತ್ತೀಸಗಡ ಹೈಕೋರ್ಟ್ ಈಗಾಗಲೇ ಮೀಸಲಾತಿಯ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚು ಮಾಡುವಂತಿಲ್ಲ ಎಂದು ಎರಡು ಬಾರಿ ಹೇಳಿದೆ. ಮತ್ತೀಗ ಅದೇ ಮಾತು ಪುನರುಚ್ಚರಿಸುವ ಸಾಧ್ಯತೆ ಇದೆ ಎಂದೂ ತಜ್ಞರು ಹೇಳಿದ್ದಾರೆ.</p>.<p class="title">ಪರಿಶಿಷ್ಟ ಪಂಗಡದ (ಎಸ್.ಟಿ) ಅಭ್ಯರ್ಥಿಗಳಿಗೆ ಮೀಸಲಾಗಿರುವ ಭಾನುಪ್ರತಾಪ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆಯಲಿರುವ ಉಪಚುನಾವಣೆಗೂ ಮುನ್ನ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ.</p>.<p class="title">ರಾಜ್ಯದ ವಿವಿಧ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಉದ್ಯೋಗದಲ್ಲಿ ನೇಮಕ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಸಂಬಂಧಿಸಿದ ಎರಡು ತಿದ್ದುಪಡಿ ಮಸೂದೆಗಳನ್ನು ಛತ್ತೀಸಗಡ ವಿಧಾನಸಭೆ ಶುಕ್ರವಾರ ಅಂಗೀಕರಿಸಿದ್ದು, ಒಟ್ಟು ಮೀಸಲಾತಿಯ ಪ್ರಮಾಣವನ್ನು ಶೇ 76ಕ್ಕೆ ಏರಿಕೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ರಾಯಪುರ: </strong>ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 76ರಷ್ಟು ಮೀಸಲಾತಿ ಏರಿಕೆ ಮಾಡುವಛತ್ತೀಸಗಢ ಸರ್ಕಾರದ ಕ್ರಮವು ರಾಜಕೀಯ ಪ್ರೇರಿತವಾಗಿದ್ದು, ಇದು ನ್ಯಾಯಾಲಯದಲ್ಲಿ ನಿಲ್ಲದು ಎಂದು ರಾಜಕೀಯ ಹಾಗೂ ಕಾನೂನು ತಜ್ಞರು ವಿಶ್ಲೇಷಿಸಿದ್ದಾರೆ.</p>.<p class="title">ಛತ್ತೀಸಗಡ ಹೈಕೋರ್ಟ್ ಈಗಾಗಲೇ ಮೀಸಲಾತಿಯ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚು ಮಾಡುವಂತಿಲ್ಲ ಎಂದು ಎರಡು ಬಾರಿ ಹೇಳಿದೆ. ಮತ್ತೀಗ ಅದೇ ಮಾತು ಪುನರುಚ್ಚರಿಸುವ ಸಾಧ್ಯತೆ ಇದೆ ಎಂದೂ ತಜ್ಞರು ಹೇಳಿದ್ದಾರೆ.</p>.<p class="title">ಪರಿಶಿಷ್ಟ ಪಂಗಡದ (ಎಸ್.ಟಿ) ಅಭ್ಯರ್ಥಿಗಳಿಗೆ ಮೀಸಲಾಗಿರುವ ಭಾನುಪ್ರತಾಪ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆಯಲಿರುವ ಉಪಚುನಾವಣೆಗೂ ಮುನ್ನ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ.</p>.<p class="title">ರಾಜ್ಯದ ವಿವಿಧ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಉದ್ಯೋಗದಲ್ಲಿ ನೇಮಕ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಸಂಬಂಧಿಸಿದ ಎರಡು ತಿದ್ದುಪಡಿ ಮಸೂದೆಗಳನ್ನು ಛತ್ತೀಸಗಡ ವಿಧಾನಸಭೆ ಶುಕ್ರವಾರ ಅಂಗೀಕರಿಸಿದ್ದು, ಒಟ್ಟು ಮೀಸಲಾತಿಯ ಪ್ರಮಾಣವನ್ನು ಶೇ 76ಕ್ಕೆ ಏರಿಕೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>