<p><strong>ವಯನಾಡ್:</strong> ಪೂರ್ವಾನುಮತಿ ಪಡೆದಿಲ್ಲ ಎನ್ನುವ ಕಾರಣಕ್ಕೆ ಸಂಸದ ರಾಹುಲ್ ಗಾಂಧಿ ಅವರು ಉದ್ಘಾಟಿಸಬೇಕಿದ್ದ ಶಾಲೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ವಯನಾಡ್ ಜಿಲ್ಲಾಡಳಿತವು ಒಪ್ಪಿಗೆ ನೀಡಿಲ್ಲ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.</p>.<p>ಗುರುವಾರ ಬೆಳಗ್ಗೆ ಮುಂದೇರಿಯಲ್ಲಿ ಸರ್ಕಾರಿ ಪಿಯು ಕಾಲೇಜಿನ 12ನೇ ತರಗತಿಯ ಹೊಸ ಕಟ್ಟಡವನ್ನು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಆನ್ಲೈನ್ ಮುಖಾಂತರ ಉದ್ಘಾಟಿಸಬೇಕಿತ್ತು. ಜಿಲ್ಲಾಡಳಿತವು ಈ ಕಾರ್ಯಕ್ರಮಕ್ಕೆ ಒಪ್ಪಿಗೆ ನೀಡದೇ ಇದ್ದ ಕಾರಣ ಕಾರ್ಯಕ್ರಮವನ್ನೇ ರದ್ದುಗೊಳಿಸಲಾಯಿತು. ಇದು ರಾಜಕೀಯ ಪ್ರೇರಿತ ಪಿತೂರಿ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಐ.ಸಿ.ಬಾಲಕೃಷ್ಣನ್ ಅವರು ಆರೋಪಿಸಿದರು.</p>.<p>ನಿರ್ಮಿತಿ ಕೇಂದ್ರವು ಬಹುವಲಯ ಅಭಿವೃದ್ಧಿ ಯೋಜನೆಯಡಿ(ಎಂಎಸ್ಡಿಪಿ) ಈ ಕಟ್ಟಡವನ್ನು ₹1.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದೆ. ‘ಎಂಎಸ್ಡಿಪಿಯು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಗೊಂಡ ಯೋಜನೆಯಾಗಿದೆ. ಇದರಲ್ಲಿ ಶೇ 60 ಕೇಂದ್ರದ ಅನುದಾನ ಹಾಗೂ ಉಳಿದ ಶೇ 40 ರಾಜ್ಯದ ಅನುದಾನವಿದೆ. ಹೀಗಾಗಿ ರಾಜ್ಯ ಸರ್ಕಾರದ ಅನುಮತಿ ಪಡೆದೇ ಈ ಕಾರ್ಯಕ್ರಮವನ್ನು ಆಯೋಜಿಸಬೇಕಿತ್ತು’ ಎಂದು ಕಲ್ಪೆಟ್ಟ ಶಾಸಕ, ಸಿಪಿಐಎಂ ನಾಯಕ ಸಿ.ಕೆ ಶಶೀಂದ್ರನ್ ತಿಳಿಸಿದರು.</p>.<p>‘ಈ ಕಾರ್ಯಕ್ರಮವನ್ನು ರದ್ದುಗೊಳಿಸಿಲ್ಲ. ಬದಲಾಗಿ, ಇನ್ನೊಂದು ದಿನ ನಡೆಸಲು ತಿಳಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಆಯೋಜಕರು ನನ್ನ ಹೆಸರು ಹಾಕಿದ್ದರು. ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದ ಕಾರಣ ಜಿಲ್ಲಾಧಿಕಾರಿ ಕಾರ್ಯಕ್ರಮ ರದ್ದುಗೊಳಿಸಲು ಸೂಚಿಸಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್:</strong> ಪೂರ್ವಾನುಮತಿ ಪಡೆದಿಲ್ಲ ಎನ್ನುವ ಕಾರಣಕ್ಕೆ ಸಂಸದ ರಾಹುಲ್ ಗಾಂಧಿ ಅವರು ಉದ್ಘಾಟಿಸಬೇಕಿದ್ದ ಶಾಲೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ವಯನಾಡ್ ಜಿಲ್ಲಾಡಳಿತವು ಒಪ್ಪಿಗೆ ನೀಡಿಲ್ಲ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.</p>.<p>ಗುರುವಾರ ಬೆಳಗ್ಗೆ ಮುಂದೇರಿಯಲ್ಲಿ ಸರ್ಕಾರಿ ಪಿಯು ಕಾಲೇಜಿನ 12ನೇ ತರಗತಿಯ ಹೊಸ ಕಟ್ಟಡವನ್ನು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಆನ್ಲೈನ್ ಮುಖಾಂತರ ಉದ್ಘಾಟಿಸಬೇಕಿತ್ತು. ಜಿಲ್ಲಾಡಳಿತವು ಈ ಕಾರ್ಯಕ್ರಮಕ್ಕೆ ಒಪ್ಪಿಗೆ ನೀಡದೇ ಇದ್ದ ಕಾರಣ ಕಾರ್ಯಕ್ರಮವನ್ನೇ ರದ್ದುಗೊಳಿಸಲಾಯಿತು. ಇದು ರಾಜಕೀಯ ಪ್ರೇರಿತ ಪಿತೂರಿ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಐ.ಸಿ.ಬಾಲಕೃಷ್ಣನ್ ಅವರು ಆರೋಪಿಸಿದರು.</p>.<p>ನಿರ್ಮಿತಿ ಕೇಂದ್ರವು ಬಹುವಲಯ ಅಭಿವೃದ್ಧಿ ಯೋಜನೆಯಡಿ(ಎಂಎಸ್ಡಿಪಿ) ಈ ಕಟ್ಟಡವನ್ನು ₹1.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದೆ. ‘ಎಂಎಸ್ಡಿಪಿಯು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಗೊಂಡ ಯೋಜನೆಯಾಗಿದೆ. ಇದರಲ್ಲಿ ಶೇ 60 ಕೇಂದ್ರದ ಅನುದಾನ ಹಾಗೂ ಉಳಿದ ಶೇ 40 ರಾಜ್ಯದ ಅನುದಾನವಿದೆ. ಹೀಗಾಗಿ ರಾಜ್ಯ ಸರ್ಕಾರದ ಅನುಮತಿ ಪಡೆದೇ ಈ ಕಾರ್ಯಕ್ರಮವನ್ನು ಆಯೋಜಿಸಬೇಕಿತ್ತು’ ಎಂದು ಕಲ್ಪೆಟ್ಟ ಶಾಸಕ, ಸಿಪಿಐಎಂ ನಾಯಕ ಸಿ.ಕೆ ಶಶೀಂದ್ರನ್ ತಿಳಿಸಿದರು.</p>.<p>‘ಈ ಕಾರ್ಯಕ್ರಮವನ್ನು ರದ್ದುಗೊಳಿಸಿಲ್ಲ. ಬದಲಾಗಿ, ಇನ್ನೊಂದು ದಿನ ನಡೆಸಲು ತಿಳಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಆಯೋಜಕರು ನನ್ನ ಹೆಸರು ಹಾಕಿದ್ದರು. ರಾಜ್ಯ ಸರ್ಕಾರದ ಪೂರ್ವಾನುಮತಿ ಇಲ್ಲದ ಕಾರಣ ಜಿಲ್ಲಾಧಿಕಾರಿ ಕಾರ್ಯಕ್ರಮ ರದ್ದುಗೊಳಿಸಲು ಸೂಚಿಸಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>