ಭಾರತ್ ಜೋಡೋ ಯಾತ್ರೆ ದೆಹಲಿಯಿಂದ ಉತ್ತರ ಪ್ರದೇಶ ಪ್ರವೇಶಿಸಿದ್ದು, ಲೋನಿ ಗಡಿಯಲ್ಲಿ ಪ್ರಿಯಾಂಕ ಯಾತ್ರೆಯನ್ನು ಬರಮಾಡಿಕೊಂಡರು. ಬಳಿಕ ಮಾತನಾಡಿ, ದೇಶದಲ್ಲಿ ಅದಾನಿ ಮತ್ತು ಅಂಬಾನಿಯಂತಹ ದೊಡ್ಡ ಕೈಗಾರಿಕೋದ್ಯಮಿಗಳು ಅನೇಕ ರಾಜಕಾರಣಿಗಳು, ಸರ್ಕಾರಿ ಸಂಸ್ಥೆಗಳು ಮತ್ತು ಮಾಧ್ಯಮಗಳನ್ನು ಖರೀದಿಸಿರಬಹುದು. ಆದರೆ ತಮ್ಮ ಸಹೋದರನನ್ನುಎಂದಿಗೂ ಖರೀದಿಸಲು ಸಾಧ್ಯವಿಲ್ಲ ಎಂದರು.