ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳಕ್ಕೆ ರಾಹುಲ್‌ ಗಾಂಧಿ ಭೇಟಿ: 3 ದಿನಗಳ ಕ್ಷೇತ್ರ ಪ್ರವಾಸ

Last Updated 1 ಜುಲೈ 2022, 5:49 IST
ಅಕ್ಷರ ಗಾತ್ರ

ಕಣ್ಣೂರು: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಯನಾಡ್‌ ಪ್ರವಾಸ ಕೈಗೊಂಡಿದ್ದಾರೆ.

ಒಂದು ವಾರದ ಹಿಂದಷ್ಟೇ ಸಂಸದರ ಕಚೇರಿಗೆ ಎಸ್‌ಎಫ್‌ಐ ಕಾರ್ಯಕರ್ತರು ನುಗ್ಗಿ ಹಾನಿ ಮಾಡಿದ್ದರು. ಕೆಲ ದಿನಗಳ ಹಿಂದೆ ತಿರುವನಂತಪುರದಲ್ಲಿರುವ ಪಕ್ಷದ ಪ್ರಧಾನ ಕಚೇರಿ ಮೇಲಿನ ದಾಳಿ ಹಿಂದೆ ಕಾಂಗ್ರೆಸ್‌ ಇದೆ ಎಂದು ಸಿಪಿಐ(ಎಂ) ಆರೋಪಿಸಿದೆ. ಉಭಯ ಪಕ್ಷಗಳ ಕಚೇರಿ ಮೇಲಿನ ದಾಳಿಯಿಂದ ಕೇರಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಈ ನಡುವೆ ರಾಹುಲ್‌ ಗಾಂಧಿ ಕೇರಳಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮೂರು ದಿನಗಳ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ರೈತರ ಬ್ಯಾಂಕ್‌ ಕಟ್ಟಡ ಉದ್ಘಾಟನೆ ಮತ್ತು ಯುಡಿಎಫ್‌ನ ಬಹುಜನ ಸಂಗಮಮ್‌ಗೆ ಚಾಲನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್‌ ಗಾಂಧಿ ಅವರನ್ನು ಪಕ್ಷದ ಅಲ್ಲಿನ ಮುಖ್ಯಸ್ಥ ಕೆ. ಸುಧಾಕರನ್‌ ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT