ಒಂದು ವಾರದ ಹಿಂದಷ್ಟೇ ಸಂಸದರ ಕಚೇರಿಗೆ ಎಸ್ಎಫ್ಐ ಕಾರ್ಯಕರ್ತರು ನುಗ್ಗಿ ಹಾನಿ ಮಾಡಿದ್ದರು. ಕೆಲ ದಿನಗಳ ಹಿಂದೆ ತಿರುವನಂತಪುರದಲ್ಲಿರುವ ಪಕ್ಷದ ಪ್ರಧಾನ ಕಚೇರಿ ಮೇಲಿನ ದಾಳಿ ಹಿಂದೆ ಕಾಂಗ್ರೆಸ್ ಇದೆ ಎಂದು ಸಿಪಿಐ(ಎಂ) ಆರೋಪಿಸಿದೆ. ಉಭಯ ಪಕ್ಷಗಳ ಕಚೇರಿ ಮೇಲಿನ ದಾಳಿಯಿಂದ ಕೇರಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಈ ನಡುವೆ ರಾಹುಲ್ ಗಾಂಧಿ ಕೇರಳಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.