ನವದೆಹಲಿ: ಸಾರ್ವಜನಿಕ ಸಾರಿಗೆಗಾಗಿ ಜನರು ಸುದೀರ್ಘ ಸಮಯ ಸರತಿ ಸಾಲುಗಳಲ್ಲಿ ನಿಲ್ಲುತ್ತಿರುವುದು ಕೇವಲ ಕೋವಿಡ್ ನಿರ್ಬಂಧಗಳಿಂದಲ್ಲ, ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಪರಿಣಾಮ ಎಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ಮೆಟ್ರೋ ನಿಲ್ದಾಣಗಳಲ್ಲಿ ರೈಲಿಗಾಗಿ ಪ್ರಯಾಣಿಕರು ಸರತಿ ಸಾಲಿನಲ್ಲಿ ಕಾಯುತ್ತಿರುವ ಬಗ್ಗೆ ವರದಿಗಳು ಬಂದ ಬಳಿಕ ರಾಹುಲ್ ಗಾಂದಿ, ಈ ಬಗ್ಗೆ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಕೆಲವು ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಕಾಯುವ ಸಮಯ ಸುಮಾರು ಒಂದು ಗಂಟೆಯವರೆಗೆ ಏರಿದೆ.