<p><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಲ್ಪಾವಧಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನಾಚರಣೆ (ಮಂಗಳವಾರ) ಬಳಿಕ ಅವರುಇಟಲಿಗೆ ತೆರಳಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, 'ರಾಹುಲ್ ಗಾಂಧಿ ವೈಯಕ್ತಿಕ ಕಾರಣಗಳಿಗಾಗಿ ಅಲ್ಪಾವಧಿಯ ವಿದೇಶ ಭೇಟಿಗೆ ತೆರಳಿದ್ದಾರೆ. ಬಿಜೆಪಿ ಮತ್ತು ಅವರ ಗೆಳೆಯರು ಮಾಧ್ಯಮಗಳಲ್ಲಿ ಅನವಶ್ಯಕವಾಗಿ ಗಾಳಿ ಸುದ್ದಿಗಳನ್ನು ಹರಡಬಾರದು' ಎಂದು ಹೇಳಿದ್ದಾರೆ.</p>.<p>ರಾಹುಲ್ ಗಾಂಧಿ ಅವರು ಜನವರಿ 3ರಂದು ಪಂಜಾಬ್ನ ಮೊಗಾದಲ್ಲಿನ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗುವುದು ನಿಗದಿಯಾಗಿದೆ. ಆ ವೇಳೆಗೆ ಅವರು ಹಿಂದಿರುಗಲಿರುವುದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.</p>.<p>ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ಸೇರಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಜನವರಿ ಮಧ್ಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/congress-rahul-gandhi-reaction-over-karnataka-urban-local-body-election-results-2021-897630.html" itemprop="url">ಫಲಿತಾಂಶ: ಕಾಂಗ್ರೆಸ್ ಮೇಲುಗೈ, 'ವೆಲ್ ಡನ್' ಎಂದ ರಾಹುಲ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಲ್ಪಾವಧಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನಾ ದಿನಾಚರಣೆ (ಮಂಗಳವಾರ) ಬಳಿಕ ಅವರುಇಟಲಿಗೆ ತೆರಳಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, 'ರಾಹುಲ್ ಗಾಂಧಿ ವೈಯಕ್ತಿಕ ಕಾರಣಗಳಿಗಾಗಿ ಅಲ್ಪಾವಧಿಯ ವಿದೇಶ ಭೇಟಿಗೆ ತೆರಳಿದ್ದಾರೆ. ಬಿಜೆಪಿ ಮತ್ತು ಅವರ ಗೆಳೆಯರು ಮಾಧ್ಯಮಗಳಲ್ಲಿ ಅನವಶ್ಯಕವಾಗಿ ಗಾಳಿ ಸುದ್ದಿಗಳನ್ನು ಹರಡಬಾರದು' ಎಂದು ಹೇಳಿದ್ದಾರೆ.</p>.<p>ರಾಹುಲ್ ಗಾಂಧಿ ಅವರು ಜನವರಿ 3ರಂದು ಪಂಜಾಬ್ನ ಮೊಗಾದಲ್ಲಿನ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗುವುದು ನಿಗದಿಯಾಗಿದೆ. ಆ ವೇಳೆಗೆ ಅವರು ಹಿಂದಿರುಗಲಿರುವುದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.</p>.<p>ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ಸೇರಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಜನವರಿ ಮಧ್ಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/congress-rahul-gandhi-reaction-over-karnataka-urban-local-body-election-results-2021-897630.html" itemprop="url">ಫಲಿತಾಂಶ: ಕಾಂಗ್ರೆಸ್ ಮೇಲುಗೈ, 'ವೆಲ್ ಡನ್' ಎಂದ ರಾಹುಲ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>