ನವದೆಹಲಿ: ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ರಾಜಕೀಯ ಸ್ವರೂಪ ಪಡೆದಿರುವ ಬೆನ್ನಲ್ಲೇ ಈ ವಿಚಾರವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
‘ಶಿಕ್ಷಣದ ಹಾದಿಯಲ್ಲಿ ಹಿಜಾಬ್ ಅಡ್ಡಿಯಾಗುವಂತೆ ಮಾಡುವ ಮೂಲಕ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ನಾವು ಕದಿಯುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ಕೊಡುತ್ತಾಳೆ. ಆಕೆ ತಾರತಮ್ಯ ಮಾಡುವುದಿಲ್ಲ’ ಎಂದು ರಾಹುಲ್ ಗಾಂಧಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
By letting students’ hijab come in the way of their education, we are robbing the future of the daughters of India.
Ma Saraswati gives knowledge to all. She doesn’t differentiate. #SaraswatiPuja
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿದ ವಿಚಾರ ಉಡುಪಿ ಹಾಗೂ ಕುಂದಾಪುರದಲ್ಲಿ ವರದಿಯಾಗಿತ್ತು. ಬಳಿಕ ಬೆಳಗಾವಿ ರಾಮದುರ್ಗದ ಕಾಲೇಜಿನಲ್ಲೂ ಇದೇ ರೀತಿಯ ವಿದ್ಯಮಾನ ನಡೆದಿತ್ತು. ಸದ್ಯ ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ.