<p><strong>ನವದೆಹಲಿ:</strong> ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p>.<p>ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ರಾಜಕೀಯ ಸ್ವರೂಪ ಪಡೆದಿರುವ ಬೆನ್ನಲ್ಲೇ ಈ ವಿಚಾರವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/hijab-war-of-words-between-political-congress-bjp-leaders-908192.html" target="_blank">ಹಿಜಾಬ್ | ರಾಜಕೀಯ ‘ಅಮಲು’: ಕಾಂಗ್ರೆಸ್–ಬಿಜೆಪಿ ಮಧ್ಯೆ ವಾಕ್ಸಮರ</a></p>.<p>‘ಶಿಕ್ಷಣದ ಹಾದಿಯಲ್ಲಿ ಹಿಜಾಬ್ ಅಡ್ಡಿಯಾಗುವಂತೆ ಮಾಡುವ ಮೂಲಕ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ನಾವು ಕದಿಯುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ಕೊಡುತ್ತಾಳೆ. ಆಕೆ ತಾರತಮ್ಯ ಮಾಡುವುದಿಲ್ಲ’ ಎಂದು ರಾಹುಲ್ ಗಾಂಧಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿದ ವಿಚಾರ ಉಡುಪಿ ಹಾಗೂ ಕುಂದಾಪುರದಲ್ಲಿ ವರದಿಯಾಗಿತ್ತು. ಬಳಿಕ ಬೆಳಗಾವಿ ರಾಮದುರ್ಗದ ಕಾಲೇಜಿನಲ್ಲೂ ಇದೇ ರೀತಿಯ ವಿದ್ಯಮಾನ ನಡೆದಿತ್ತು. ಸದ್ಯ ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/who-want-hijab-they-may-go-madarasa-says-mp-pratap-simha-908212.html" target="_blank">ಹಿಜಾಬ್ ಬೇಕೆನ್ನುವವರು ಮದರಸಕ್ಕೆ ಹೋಗಲಿ: ಸಂಸದ ಪ್ರತಾಪ ಸಿಂಹ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.</p>.<p>ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ರಾಜಕೀಯ ಸ್ವರೂಪ ಪಡೆದಿರುವ ಬೆನ್ನಲ್ಲೇ ಈ ವಿಚಾರವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/hijab-war-of-words-between-political-congress-bjp-leaders-908192.html" target="_blank">ಹಿಜಾಬ್ | ರಾಜಕೀಯ ‘ಅಮಲು’: ಕಾಂಗ್ರೆಸ್–ಬಿಜೆಪಿ ಮಧ್ಯೆ ವಾಕ್ಸಮರ</a></p>.<p>‘ಶಿಕ್ಷಣದ ಹಾದಿಯಲ್ಲಿ ಹಿಜಾಬ್ ಅಡ್ಡಿಯಾಗುವಂತೆ ಮಾಡುವ ಮೂಲಕ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ನಾವು ಕದಿಯುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ಕೊಡುತ್ತಾಳೆ. ಆಕೆ ತಾರತಮ್ಯ ಮಾಡುವುದಿಲ್ಲ’ ಎಂದು ರಾಹುಲ್ ಗಾಂಧಿ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿದ ವಿಚಾರ ಉಡುಪಿ ಹಾಗೂ ಕುಂದಾಪುರದಲ್ಲಿ ವರದಿಯಾಗಿತ್ತು. ಬಳಿಕ ಬೆಳಗಾವಿ ರಾಮದುರ್ಗದ ಕಾಲೇಜಿನಲ್ಲೂ ಇದೇ ರೀತಿಯ ವಿದ್ಯಮಾನ ನಡೆದಿತ್ತು. ಸದ್ಯ ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/who-want-hijab-they-may-go-madarasa-says-mp-pratap-simha-908212.html" target="_blank">ಹಿಜಾಬ್ ಬೇಕೆನ್ನುವವರು ಮದರಸಕ್ಕೆ ಹೋಗಲಿ: ಸಂಸದ ಪ್ರತಾಪ ಸಿಂಹ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>