<p class="title">ಕಥುವಾ, ಜಮ್ಮು ಮತ್ತು ಕಾಶ್ಮೀರ (ಪಿಟಿಐ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂದೇಶವನ್ನು ದೇಶದ ಪ್ರತಿ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಹಾಥ್ ಸೆ ಹಾಥ್ ಜೋಡೊ’ ಅಭಿಯಾನವನ್ನು ಕಾಂಗ್ರೆಸ್ ಮುಂದಿನ ವಾರ ಆರಂಭಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಹೇಳಿದ್ದಾರೆ. </p>.<p class="bodytext">ಎರಡು ತಿಂಗಳ ಅಭಿಯಾನ ಇದಾಗಿದ್ದು, ಜನವರಿ 26ರಂದು ಆರಂಭವಾಗಿ ಮಾರ್ಚ್ 26ರವರೆಗೆ ನಡೆಯಲಿದೆ.</p>.<p class="bodytext">ದೇಶದಲ್ಲಿ ದ್ವೇಷ ಕೊನೆಗಾಣಿಸಿ ಪ್ರೀತಿ ಹಂಚಬೇಕು ಎಂಬ ಸಂದೇಶ ಹೊತ್ತು ರಾಹುಲ್ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅವರ ಸಂದೇಶವನ್ನು ಪ್ರತಿ ಮನೆಗೆ ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರನ್ನು ಎಲ್ಲಾ 2.5 ಲಕ್ಷ ಪಂಚಾಯಿತಿಗಳು, 6 ಲಕ್ಷ ಗ್ರಾಮಗಳು ಮತ್ತು 10 ಲಕ್ಷ ಮತಗಟ್ಟೆಗಳಿಗೆ ಕಳಿಸಲಾಗುವುದು ಎಂದು ಜೈರಾಮ್ ರಮೇಶ್ ಅವರು ಭಾರತ್ ಜೋಡೊ ಯಾತ್ರೆ ವೇಳೆ ಹೇಳಿದ್ದಾರೆ.</p>.<p class="bodytext">ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪಪಟ್ಟಿ ಸಿದ್ಧಪಡಿಸಿದೆ. ಅದನ್ನು ದೆಹಲಿಯಲ್ಲಿ ಶನಿವಾರ ಬಿಡುಗಡೆ ಮಾಡಲಾಗುವುದು. ಆರೋಪಪಟ್ಟಿಯ ಪ್ರತಿ ಮತ್ತು ರಾಹುಲ್ ಗಾಂಧಿ ಅವರ ಸಂದೇಶವನ್ನು ತೆಗೆದುಕೊಂಡು ದೇಶದ ಪ್ರತಿ ಮನೆಗೂ ಹೋಗುತ್ತೇವೆ ಎಂದರು.</p>.<p class="bodytext">ರಾಹುಲ್ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಆರ್ಎಸ್ಎಸ್–ಬಿಜೆಪಿ ಸಿದ್ಧಾಂತ ಮತ್ತು ಕಾಂಗ್ರೆಸ್ ಸಿದ್ಧಾಂತದ ನಡುವಿನ ಹೋರಾಟ. ಕಾಂಗ್ರೆಸ್ ಸದಾ ಭ್ರಾತೃತ್ವದಲ್ಲಿ ನಂಬಿಕೆಯಿಡುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಕಥುವಾ, ಜಮ್ಮು ಮತ್ತು ಕಾಶ್ಮೀರ (ಪಿಟಿಐ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂದೇಶವನ್ನು ದೇಶದ ಪ್ರತಿ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಹಾಥ್ ಸೆ ಹಾಥ್ ಜೋಡೊ’ ಅಭಿಯಾನವನ್ನು ಕಾಂಗ್ರೆಸ್ ಮುಂದಿನ ವಾರ ಆರಂಭಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು ಹೇಳಿದ್ದಾರೆ. </p>.<p class="bodytext">ಎರಡು ತಿಂಗಳ ಅಭಿಯಾನ ಇದಾಗಿದ್ದು, ಜನವರಿ 26ರಂದು ಆರಂಭವಾಗಿ ಮಾರ್ಚ್ 26ರವರೆಗೆ ನಡೆಯಲಿದೆ.</p>.<p class="bodytext">ದೇಶದಲ್ಲಿ ದ್ವೇಷ ಕೊನೆಗಾಣಿಸಿ ಪ್ರೀತಿ ಹಂಚಬೇಕು ಎಂಬ ಸಂದೇಶ ಹೊತ್ತು ರಾಹುಲ್ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅವರ ಸಂದೇಶವನ್ನು ಪ್ರತಿ ಮನೆಗೆ ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರನ್ನು ಎಲ್ಲಾ 2.5 ಲಕ್ಷ ಪಂಚಾಯಿತಿಗಳು, 6 ಲಕ್ಷ ಗ್ರಾಮಗಳು ಮತ್ತು 10 ಲಕ್ಷ ಮತಗಟ್ಟೆಗಳಿಗೆ ಕಳಿಸಲಾಗುವುದು ಎಂದು ಜೈರಾಮ್ ರಮೇಶ್ ಅವರು ಭಾರತ್ ಜೋಡೊ ಯಾತ್ರೆ ವೇಳೆ ಹೇಳಿದ್ದಾರೆ.</p>.<p class="bodytext">ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪಪಟ್ಟಿ ಸಿದ್ಧಪಡಿಸಿದೆ. ಅದನ್ನು ದೆಹಲಿಯಲ್ಲಿ ಶನಿವಾರ ಬಿಡುಗಡೆ ಮಾಡಲಾಗುವುದು. ಆರೋಪಪಟ್ಟಿಯ ಪ್ರತಿ ಮತ್ತು ರಾಹುಲ್ ಗಾಂಧಿ ಅವರ ಸಂದೇಶವನ್ನು ತೆಗೆದುಕೊಂಡು ದೇಶದ ಪ್ರತಿ ಮನೆಗೂ ಹೋಗುತ್ತೇವೆ ಎಂದರು.</p>.<p class="bodytext">ರಾಹುಲ್ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಆರ್ಎಸ್ಎಸ್–ಬಿಜೆಪಿ ಸಿದ್ಧಾಂತ ಮತ್ತು ಕಾಂಗ್ರೆಸ್ ಸಿದ್ಧಾಂತದ ನಡುವಿನ ಹೋರಾಟ. ಕಾಂಗ್ರೆಸ್ ಸದಾ ಭ್ರಾತೃತ್ವದಲ್ಲಿ ನಂಬಿಕೆಯಿಡುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>