ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಸಮ್ಮುಖದಲ್ಲಿ ಭೂಸೇನೆ, ವಾಯುಪಡೆ, ನೌಕಾಪಡೆಯ ಸಮವಸ್ತ್ರದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ ಅವರು ಈ ಕುರಿತು ಚರ್ಚಿಸುವುದರ ಬದಲು ರಾಜಕೀಯ ನಾಯಕತ್ವವು ರಾಷ್ಟ್ರೀಯ ಭದ್ರತೆಯ ಕುರಿತು ಚರ್ಚಿಸಬೇಕು ಹಾಗೂ ಲಡಾಖ್ನಲ್ಲಿ ಚೀನಾ ವಿರುದ್ಧ ಹೋರಾಡುತ್ತಿರುವ ಸೇನಾಪಡೆಯನ್ನು ಹೇಗೆ ಮತ್ತಷ್ಟು ಸದೃಢಗೊಳಿಸಬಹುದು ಎನ್ನುವುದರ ಬಗ್ಗೆ ಚರ್ಚಿಸಬೇಕು ಎಂದರು ಎಂದು ಮೂಲಗಳು ತಿಳಿಸಿವೆ.