ನವದೆಹಲಿ: ಬುಧವಾರ ಪುದುಚೇರಿಗೆ ಭೇಟಿ ನೀಡಿದ್ದ ವೇಳೆ ಮೀನುಗಾರರೊಡನೆ ಸಂವಾದ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಬೇಕೆಂದು ಕೇಳಿ ಪೇಚಿಗೆ ಸಿಲುಕಿದ್ದಾರೆ. ಮೀನುಗಾರರನ್ನು ಕಡಲ ರೈತರು ಎಂದು ಕರೆದ ರಾಹುಲ್ ಗಾಂಧಿ, ಕೃಷಿ ಮತ್ತು ರೈತ ಕಾಯ್ದೆ ಬಗ್ಗೆ ಪ್ರಸ್ತಾಪಿಸಿದ ಸಂದರ್ಭದಲ್ಲಿ ಮೀನುಗಾರಿಕೆಗೆ ಕೂಡ ಪ್ರತ್ಯೇಕ ಸಚಿವಾಲಯ ಬೇಕೆಂದು ಹೇಳಿದ್ದಾರೆ.