ಕೋವಿಡ್ ಸಾವಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ ವರದಿ ಬಿಡುಗಡೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ರಾಹುಲ್ ಗಾಂಧಿ, ಕೋವಿಡ್ ಸಾಂಕ್ರಾಮಿಕದಿಂದ 47 ಲಕ್ಷ ಭಾರತೀಯರು ಮೃತಪಟ್ಟಿದ್ದಾರೆ. ಸರ್ಕಾರ ಹೇಳಿಕೊಂಡಂತೆ ಕೇವಲ 4.8 ಲಕ್ಷ ಮಂದಿಯಲ್ಲ. ವಿಜ್ಞಾನ ಸುಳ್ಳು ಹೇಳುವುದಿಲ್ಲ, ಮೋದಿ ಹೇಳುತ್ತಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ. ₹4 ಲಕ್ಷ ಪರಿಹಾರವನ್ನು ನೀಡಿ ಅವರನ್ನು ಬೆಂಬಲಿಸಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.