<p><strong>ನವದೆಹಲಿ</strong>: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಸಂಸತ್ತಿಗೆ ತೆರಳಿದರು.</p>.<p>ಈ ವೇಳೆ ರಾಹುಲ್ ಗಾಂಧಿ, ಸಂಸದರಾದ ಪ್ರತಾಪ್ ಸಿಂಗ್ ಬಜ್ವಾ, ರವನೀತ್ ಸಿಂಗ್ ಬಿಟ್ಟು ಮತ್ತು ದೀಪಿಂದರ್ ಸಿಂಗ್ ಅವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ‘ಮೂರ್ನಾಲ್ಕು ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಈ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ದೇಶದ ಜನರಿಗೆ ಈ ಬಗ್ಗೆ ತಿಳಿದಿದೆ. ಇದು ರೈತರ ಅನೂಕೂಲಕ್ಕಾಗಿ ತರಲಾದ ಕಾನೂನುಗಳಲ್ಲ. ಹಾಗಾಗಿ ಈ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ನಾಯಕರುಗಳಾದ ರಣದೀಪ್ ಸುರ್ಜೇವಾಲಾ ಮತ್ತು ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ಸೇರಿದಂತೆ ಹಲವರನ್ನು ಸಂಸತ್ತಿನ ಹೊರಗೆ ಬಂಧಿಸಿ, ಮಂದಿರ ಮಾರ್ಗ ಪೊಲೀಸ್ ಠಾಣೆಗೆ ದೆಹಲಿ ಪೊಲೀಸರು ಕರೆದುಕೊಂಡು ಹೋದರು.</p>.<p>ಈ ವೇಳೆ ಬಂಧಿತ ನಾಯಕರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಘೋಷಣೆಗಳನ್ನು ಕೂಗಿದರು.</p>.<p>‘ಈ ರೀತಿಯ ಕ್ರಮಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಹೋರಾಟವನ್ನು ಮುಂದುವರಿಸುತ್ತೇವೆ. ದೇಶದ 62 ಕೋಟಿ ರೈತರ ಹಕ್ಕುಗಳನ್ನು ಮೂರ್ನಾಲ್ಕು ಕೈಗಾರಿಕೋದ್ಯಮಿಗಳ ಕೈಗೆ ನೀಡಲು ನಾವು ಮೋದಿ ಸರ್ಕಾರಕ್ಕೆ ಬಿಡುವುದಿಲ್ಲ’ ಎಂದು ಸುರ್ಜೇವಾಲಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಸಂಸತ್ತಿಗೆ ತೆರಳಿದರು.</p>.<p>ಈ ವೇಳೆ ರಾಹುಲ್ ಗಾಂಧಿ, ಸಂಸದರಾದ ಪ್ರತಾಪ್ ಸಿಂಗ್ ಬಜ್ವಾ, ರವನೀತ್ ಸಿಂಗ್ ಬಿಟ್ಟು ಮತ್ತು ದೀಪಿಂದರ್ ಸಿಂಗ್ ಅವರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ‘ಮೂರ್ನಾಲ್ಕು ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಈ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ದೇಶದ ಜನರಿಗೆ ಈ ಬಗ್ಗೆ ತಿಳಿದಿದೆ. ಇದು ರೈತರ ಅನೂಕೂಲಕ್ಕಾಗಿ ತರಲಾದ ಕಾನೂನುಗಳಲ್ಲ. ಹಾಗಾಗಿ ಈ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ಕಾಂಗ್ರೆಸ್ ನಾಯಕರುಗಳಾದ ರಣದೀಪ್ ಸುರ್ಜೇವಾಲಾ ಮತ್ತು ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ಸೇರಿದಂತೆ ಹಲವರನ್ನು ಸಂಸತ್ತಿನ ಹೊರಗೆ ಬಂಧಿಸಿ, ಮಂದಿರ ಮಾರ್ಗ ಪೊಲೀಸ್ ಠಾಣೆಗೆ ದೆಹಲಿ ಪೊಲೀಸರು ಕರೆದುಕೊಂಡು ಹೋದರು.</p>.<p>ಈ ವೇಳೆ ಬಂಧಿತ ನಾಯಕರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಘೋಷಣೆಗಳನ್ನು ಕೂಗಿದರು.</p>.<p>‘ಈ ರೀತಿಯ ಕ್ರಮಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಹೋರಾಟವನ್ನು ಮುಂದುವರಿಸುತ್ತೇವೆ. ದೇಶದ 62 ಕೋಟಿ ರೈತರ ಹಕ್ಕುಗಳನ್ನು ಮೂರ್ನಾಲ್ಕು ಕೈಗಾರಿಕೋದ್ಯಮಿಗಳ ಕೈಗೆ ನೀಡಲು ನಾವು ಮೋದಿ ಸರ್ಕಾರಕ್ಕೆ ಬಿಡುವುದಿಲ್ಲ’ ಎಂದು ಸುರ್ಜೇವಾಲಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>