ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ವಿರುದ್ಧ ಪ್ರತಿಭಟನೆ ನಡೆಸಿದ ಪಕ್ಷದ ಸಂಸದರು ಹಾಗೂ ಕಾರ್ಯಕರ್ತರ ವಿರುದ್ಧ ‘ರಾಜಕೀಯ ದೌರ್ಜನ್ಯ’ ಎಸಗಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ವಿಚಾರವನ್ನು ರಾಷ್ಟ್ರಪತಿ ಅವರ ಗಮನಕ್ಕೆ ತರಲು ನಿರ್ಧರಿಸಿದೆ. ರಾಮನಾಥ ಕೋವಿಂದ್ ಅವರನ್ನು ಶುಕ್ರವಾರ ಭೇಟಿಯಾಗಿ, ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರು ದಾಖಲಿಸಲು ಪಕ್ಷ ನಿರ್ಧರಿಸಿದೆ.