<p><strong>ನವದೆಹಲಿ</strong>: ಕಲ್ಲಿದ್ದಲು ಬಿಕ್ಕಟ್ಟಿನ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ‘ನಕಲಿ ಜ್ಯೋತಿಷಿ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.</p>.<p>ಈ ಕುರಿತು ಸುದ್ದಿಸಂಸ್ಥೆ ‘ಎಎನ್ಐ’ ಜೊತೆ ಮಾತನಾಡಿರುವ ಅವರು, ‘ಭಾರತದಾದ್ಯಂತ ಕಲ್ಲಿದ್ದಲು ಸಾಗಣೆಯನ್ನು ತ್ವರಿತಗೊಳಿಸಲು ಕಲ್ಲಿದ್ದಲು, ವಿದ್ಯುತ್ ಮತ್ತು ರೈಲ್ವೆ ಸಚಿವಾಲಯಗಳು ಕೆಲಸ ಮಾಡುತ್ತಿವೆ’ ಎಂದು ಹೇಳಿದ್ದಾರೆ.</p>.<p>‘ಇಂದು ನಾವು 818 ಮಿಲಿಯನ್ ಟನ್ ಕಲ್ಲಿದ್ದಲನ್ನು ಪೂರೈಸುತ್ತಿದ್ದೇವೆ. ರಾಹುಲ್ ಗಾಂಧಿ ಸತ್ಯವನ್ನು ತಿಳಿಯದೇ ಮಾತನಾಡುತ್ತಲೇ ಇದ್ದಾರೆ. ಅವರೊಬ್ಬ ನಕಲಿ ಜ್ಯೋತಿಷಿ’ ಎಂದು ಜೋಶಿ ಟೀಕಿಸಿದ್ದಾರೆ.</p>.<p>'ರಾಷ್ಟ್ರದಲ್ಲಿ 8 ದಿನಕ್ಕಾಗುವಷ್ಟು ಕಲ್ಲಿದ್ದಲು ದಾಸ್ತಾನು ಉಳಿದಿದೆ. ಇದು ಕಳೆದ 8 ವರ್ಷಗಳಲ್ಲಿ ಆಡಿದ ದೊಡ್ಡ ಮಾತುಗಳ ಫಲಿತಾಂಶವಾಗಿದೆ. ಮೋದಿ ಅವರೇ, ಹಣದುಬ್ಬರವು ಭೀತಿಯನ್ನು ಹುಟ್ಟುಹಾಕಿದೆ. ವಿದ್ಯುತ್ ಕಡಿತವು ಸಣ್ಣ ಕಾರ್ಖಾನೆಗಳನ್ನು ನಾಶ ಮಾಡಲಿದೆ. ಇದು ಹೆಚ್ಚಿನ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡಲಿದೆ' ಎಂದು ರಾಹುಲ್ ವಾಗ್ದಾಳಿ ನಡೆಸಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಲ್ಲಿದ್ದಲು ಬಿಕ್ಕಟ್ಟಿನ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ‘ನಕಲಿ ಜ್ಯೋತಿಷಿ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.</p>.<p>ಈ ಕುರಿತು ಸುದ್ದಿಸಂಸ್ಥೆ ‘ಎಎನ್ಐ’ ಜೊತೆ ಮಾತನಾಡಿರುವ ಅವರು, ‘ಭಾರತದಾದ್ಯಂತ ಕಲ್ಲಿದ್ದಲು ಸಾಗಣೆಯನ್ನು ತ್ವರಿತಗೊಳಿಸಲು ಕಲ್ಲಿದ್ದಲು, ವಿದ್ಯುತ್ ಮತ್ತು ರೈಲ್ವೆ ಸಚಿವಾಲಯಗಳು ಕೆಲಸ ಮಾಡುತ್ತಿವೆ’ ಎಂದು ಹೇಳಿದ್ದಾರೆ.</p>.<p>‘ಇಂದು ನಾವು 818 ಮಿಲಿಯನ್ ಟನ್ ಕಲ್ಲಿದ್ದಲನ್ನು ಪೂರೈಸುತ್ತಿದ್ದೇವೆ. ರಾಹುಲ್ ಗಾಂಧಿ ಸತ್ಯವನ್ನು ತಿಳಿಯದೇ ಮಾತನಾಡುತ್ತಲೇ ಇದ್ದಾರೆ. ಅವರೊಬ್ಬ ನಕಲಿ ಜ್ಯೋತಿಷಿ’ ಎಂದು ಜೋಶಿ ಟೀಕಿಸಿದ್ದಾರೆ.</p>.<p>'ರಾಷ್ಟ್ರದಲ್ಲಿ 8 ದಿನಕ್ಕಾಗುವಷ್ಟು ಕಲ್ಲಿದ್ದಲು ದಾಸ್ತಾನು ಉಳಿದಿದೆ. ಇದು ಕಳೆದ 8 ವರ್ಷಗಳಲ್ಲಿ ಆಡಿದ ದೊಡ್ಡ ಮಾತುಗಳ ಫಲಿತಾಂಶವಾಗಿದೆ. ಮೋದಿ ಅವರೇ, ಹಣದುಬ್ಬರವು ಭೀತಿಯನ್ನು ಹುಟ್ಟುಹಾಕಿದೆ. ವಿದ್ಯುತ್ ಕಡಿತವು ಸಣ್ಣ ಕಾರ್ಖಾನೆಗಳನ್ನು ನಾಶ ಮಾಡಲಿದೆ. ಇದು ಹೆಚ್ಚಿನ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡಲಿದೆ' ಎಂದು ರಾಹುಲ್ ವಾಗ್ದಾಳಿ ನಡೆಸಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>