ಭಾರತವು ಶ್ರೀಲಂಕಾದಂತೆಯೇ ಭಾಸವಾಗುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ತೈಲ ಬೆಲೆ, ನಿರುದ್ಯೋಗ ಹಾಗೂ ಕೋಮು ಹಿಂಸಾಚಾರದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಟ್ವೀಟ್ ಮಾಡಿದ್ದಾರೆ.
ಭಾರತ ಹಾಗೂ ಶ್ರೀಲಂಕಾದ ಪರಿಸ್ಥಿತಿಯನ್ನು ತುಲನೆ ಮಾಡುವ ರೇಖಾ ನಕ್ಷೆಯನ್ನು ಅವರು ಹಂಚಿಕೊಂಡಿದ್ದಾರೆ. ಇದರಲ್ಲಿ ತೈಲ ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ತುಲನಾತ್ಮಕ ಮಾಹಿತಿ ಇದೆ.
ಭಾರತವನ್ನು ಶ್ರೀಲಂಕಾಗೆ ಹೋಲಿಸಿರುವ ರಾಹುಲ್, ‘ಜನರನ್ನು ವಿಚಲಿತಗೊಳಿಸುವುದರಿಂದ ಸತ್ಯಗಳು ಬದಲಾಗುವುದಿಲ್ಲ. ಭಾರತವು ಶ್ರೀಲಂಕಾದಂತೆಯೇ ಭಾಸವಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.
ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇತ್ತೀಚಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ, ಮಹಿಂದಾ ರಾಜಪಕ್ಸ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Distracting people won’t change the facts. India looks a lot like Sri Lanka. pic.twitter.com/q1dptUyZvM
— Rahul Gandhi (@RahulGandhi) May 18, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.