<p><strong>ನವದೆಹಲಿ</strong>: ಪೆಗಾಸಸ್ ಗೂಢಚರ್ಯೆ ಪ್ರಕರಣ ವಿರುದ್ಧ ಕೈಗೊಳ್ಳಬೇಕಾದ ಹೋರಾಟ ಕುರಿತು ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಂಗಳವಾರಬೆಳಿಗ್ಗೆ ಪ್ರತಿಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ.</p>.<p class="bodytext">ಪ್ರಕರಣ ಕುರಿತು ಸರ್ಕಾರದ ಹೇಳಿಕೆ ಹಿಂದೆಯೇ ಮುಖಂಡರ ಸಭೆ ಕರೆಯಲಾಗಿದೆ. ಹೋರಾಟ ಕುರಿತಂತೆ ವಿರೋಧಪಕ್ಷಗಳಲ್ಲಿ ಒಗ್ಗಟ್ಟು ಮೂಡಿಸುವುದು ಈ ಸಭೆಯ ಉದ್ದೇಶ ಎನ್ನಲಾಗಿದೆ. ವಿರೋಧಪಕ್ಷಗಳ ಸಂಸದೀಯ ಪಕ್ಷದ ನಾಯಕರು ಹಾಗೂ ವಿರೋಧಪಕ್ಷಗಳ ಎಲ್ಲ ಸಂಸದರಿಗೂ ಆಹ್ವಾನ ಕಳುಹಿಸಲಾಗಿದೆ.</p>.<p>ಪೆಗಾಸಸ್ ಗೂಢಚರ್ಯೆ ಕುರಿತು ಚರ್ಚೆಗೆ ಒತ್ತಾಯಿಸಿ, ವಿರೋಧಪಕ್ಷಗಳು ನಿತ್ಯ ನಿಲುವಳಿ ಸೂಚನೆಯನ್ನು ಕಳುಹಿಸುತ್ತಿವೆ. ಮಾಹಿತಿ ತಂತ್ರಜ್ಞಾನ ಸಚಿವರು ಈಗಾಗಲೇ ಹೇಳಿಕೆ ನೀಡಿದ್ದು ಚರ್ಚೆ ಅನಗತ್ಯ ಎಂದು ಸರ್ಕಾರ ಪ್ರತಿಪಾದಿಸಿದೆ.</p>.<p>ತೃಣಮೂಲ ಕಾಂಗ್ರೆಸ್ ಪಕ್ಷಕ್ಕೂ ಆಹ್ವಾನ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ಗಾಂಧಿ ಅವರು ಕರೆದಿರುವ ಸಭೆಗಳಿಗೆ ಈವರೆಗೆ ತೃಣಮೂಲ ಕಾಂಗ್ರೆಸ್ ಗೈರುಹಾಜರಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೆಗಾಸಸ್ ಗೂಢಚರ್ಯೆ ಪ್ರಕರಣ ವಿರುದ್ಧ ಕೈಗೊಳ್ಳಬೇಕಾದ ಹೋರಾಟ ಕುರಿತು ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಂಗಳವಾರಬೆಳಿಗ್ಗೆ ಪ್ರತಿಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ.</p>.<p class="bodytext">ಪ್ರಕರಣ ಕುರಿತು ಸರ್ಕಾರದ ಹೇಳಿಕೆ ಹಿಂದೆಯೇ ಮುಖಂಡರ ಸಭೆ ಕರೆಯಲಾಗಿದೆ. ಹೋರಾಟ ಕುರಿತಂತೆ ವಿರೋಧಪಕ್ಷಗಳಲ್ಲಿ ಒಗ್ಗಟ್ಟು ಮೂಡಿಸುವುದು ಈ ಸಭೆಯ ಉದ್ದೇಶ ಎನ್ನಲಾಗಿದೆ. ವಿರೋಧಪಕ್ಷಗಳ ಸಂಸದೀಯ ಪಕ್ಷದ ನಾಯಕರು ಹಾಗೂ ವಿರೋಧಪಕ್ಷಗಳ ಎಲ್ಲ ಸಂಸದರಿಗೂ ಆಹ್ವಾನ ಕಳುಹಿಸಲಾಗಿದೆ.</p>.<p>ಪೆಗಾಸಸ್ ಗೂಢಚರ್ಯೆ ಕುರಿತು ಚರ್ಚೆಗೆ ಒತ್ತಾಯಿಸಿ, ವಿರೋಧಪಕ್ಷಗಳು ನಿತ್ಯ ನಿಲುವಳಿ ಸೂಚನೆಯನ್ನು ಕಳುಹಿಸುತ್ತಿವೆ. ಮಾಹಿತಿ ತಂತ್ರಜ್ಞಾನ ಸಚಿವರು ಈಗಾಗಲೇ ಹೇಳಿಕೆ ನೀಡಿದ್ದು ಚರ್ಚೆ ಅನಗತ್ಯ ಎಂದು ಸರ್ಕಾರ ಪ್ರತಿಪಾದಿಸಿದೆ.</p>.<p>ತೃಣಮೂಲ ಕಾಂಗ್ರೆಸ್ ಪಕ್ಷಕ್ಕೂ ಆಹ್ವಾನ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ಗಾಂಧಿ ಅವರು ಕರೆದಿರುವ ಸಭೆಗಳಿಗೆ ಈವರೆಗೆ ತೃಣಮೂಲ ಕಾಂಗ್ರೆಸ್ ಗೈರುಹಾಜರಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>