ಭಾರತ್ ಜೋಡೊ ಯಾತ್ರೆ ಕೈಗೊಂಡಿರುವ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಸ್ವ, ಚುನಾವಣೆಯಲ್ಲಿ ಸೋಲಿನ ಭಯದಿಂದಾಗಿ ಕಾಂಗ್ರೆಸ್ ನಾಯಕ ಗುಜರಾತ್ಗೆ ಬರುತ್ತಿಲ್ಲ ಎಂದು ಹೇಳಿದರು.
ಗುಜರಾತ್ನಲ್ಲಿ ರಾಹುಲ್ ಪತ್ತೆಯಿಲ್ಲ. ಸಂದರ್ಶಕ ಅಧ್ಯಾಪಕರಂತೆ ರಾಜ್ಯಕ್ಕೆ ಬರುತ್ತಾರೆ. ಹಿಮಾಚಲ ಪ್ರದೇಶದಲ್ಲೂ ಪ್ರಚಾರ ಮಾಡಿಲ್ಲ. ಚುನಾವಣೆ ನಡೆಯದ ರಾಜ್ಯಗಳಿಗೆ ಮಾತ್ರ ಭೇಟಿ ಕೊಡುತ್ತಾರೆ. ಬಹುಶಃ ಸೋಲಿನ ಭಯ ಕಾಡುತ್ತಿರಬಹುದು ಎಂದು ಹೇಳಿದರು.
ಭಾರತ್ ಜೋಡೊ ಯಾತ್ರೆಯಲ್ಲಿ ನಟಿ ಪೂಜಾ ಭಟ್ ಹಾಗೂ ಅಮೋಲ್ ಪಾಲೇಕರ್ ಪಾಲ್ಗೊಂಡಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ದುಡ್ಡು ಕೊಟ್ಟಿರಬಹುದು ಎಂದು ಆರೋಪಿಸಿದರು.
ದೆಹಲಿಯ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆಯೂ ಮನವಿ ಮಾಡಿದರು.