<p><strong>ನವದೆಹಲಿ:</strong> ಅನೇಕ ಸರ್ವಾಧಿಕಾರಿಗಳ ಹೆಸರುಗಳು 'ಎಂ' ಅಕ್ಷರದಿಂದ ಪ್ರಾರಂಭವಾಗಲು ಕಾರಣವೇನು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಅನೇಕ ಸರ್ವಾಧಿಕಾರಿಗಳು 'ಎಂ' ನಿಂದ ಪ್ರಾರಂಭವಾಗುವ ಹೆಸರುಗಳನ್ನು ಏಕೆ ಹೊಂದಿದ್ದಾರೆ? ಮಾರ್ಕಸ್, ಮುಸ್ಸೋಲಿನಿ, ಮಿಲೊಸೆವಿಕ್, ಮುಬಾರಕ್, ಮೊಬುಟು, ಮುಷರಫ್, ಮೈಕಾಂಬೆರೊ ಎಂದು ಉಲ್ಲೇಖಿಸಿದರು.</p>.<p>ರಾಹುಲ್ ಗಾಂಧಿ ಟ್ವೀಟ್ ಮಾಡಿರುವ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ ಸರ್ವಾಧಿಕಾರಿ ಎಂದು ಆರೋಪಿಸುವ ಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಯನ್ನು ನಡೆಸುತ್ತಿರುವ ರೈತರು ಹಾಗೂ ರೈತರಿಗೆ ಬೆಂಬಲ ಸೂಚಿಸುವ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿದ ಕೇಂದ್ರ ಸರ್ಕಾರದ ಧೋರಣೆಯನ್ನು ರಾಹುಲ್ ಗಾಂಧಿ ಟೀಕಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/build-bridges-not-walls-congress-leader-rahul-gandhi-advises-central-government-801696.html" itemprop="url">ಸೇತುವೆಗಳನ್ನು ನಿರ್ಮಿಸಿ, ಗೋಡೆಗಳನ್ನಲ್ಲ: ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ </a></p>.<p>ದೆಹಲಿ ಗಡಿ ಪ್ರದೇಶಗಳಲ್ಲಿ ರೈತರ ಪ್ರತಿಭಟನೆಯನ್ನು ತಡೆಯಲು ಕಾಂಕ್ರೀಟ್, ಕಬ್ಬಿಣದ ಸರಳು ಹಾಗೂ ಮೊಳೆಗಳನ್ನು ಸ್ಥಾಪಿಸಲಾಗಿತ್ತು. ಇದನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್, ಸೇತುವೆಗಳನ್ನು ನಿರ್ಮಿಸಿ, ಗೋಡೆಗಳನ್ನಲ್ಲ ಎಂದು ಹೇಳಿಕೆ ನೀಡಿದ್ದರು.</p>.<p>ಈ ಮೊದಲು ಕೇಂದ್ರ ಬಜೆಟ್ 2021 ಬಗ್ಗೆಯೂ ಟೀಕೆ ಮಾಡಿದ್ದ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರವು, ದೇಶದ ಸಂಪತ್ತನ್ನು ಬಂಡವಾಳಶಾಹಿ ಉದ್ಯಮ ಗೆಳೆಯರಿಗೆ ಹಸ್ತಾಂತರಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅನೇಕ ಸರ್ವಾಧಿಕಾರಿಗಳ ಹೆಸರುಗಳು 'ಎಂ' ಅಕ್ಷರದಿಂದ ಪ್ರಾರಂಭವಾಗಲು ಕಾರಣವೇನು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಅನೇಕ ಸರ್ವಾಧಿಕಾರಿಗಳು 'ಎಂ' ನಿಂದ ಪ್ರಾರಂಭವಾಗುವ ಹೆಸರುಗಳನ್ನು ಏಕೆ ಹೊಂದಿದ್ದಾರೆ? ಮಾರ್ಕಸ್, ಮುಸ್ಸೋಲಿನಿ, ಮಿಲೊಸೆವಿಕ್, ಮುಬಾರಕ್, ಮೊಬುಟು, ಮುಷರಫ್, ಮೈಕಾಂಬೆರೊ ಎಂದು ಉಲ್ಲೇಖಿಸಿದರು.</p>.<p>ರಾಹುಲ್ ಗಾಂಧಿ ಟ್ವೀಟ್ ಮಾಡಿರುವ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ ಸರ್ವಾಧಿಕಾರಿ ಎಂದು ಆರೋಪಿಸುವ ಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಯನ್ನು ನಡೆಸುತ್ತಿರುವ ರೈತರು ಹಾಗೂ ರೈತರಿಗೆ ಬೆಂಬಲ ಸೂಚಿಸುವ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿದ ಕೇಂದ್ರ ಸರ್ಕಾರದ ಧೋರಣೆಯನ್ನು ರಾಹುಲ್ ಗಾಂಧಿ ಟೀಕಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/build-bridges-not-walls-congress-leader-rahul-gandhi-advises-central-government-801696.html" itemprop="url">ಸೇತುವೆಗಳನ್ನು ನಿರ್ಮಿಸಿ, ಗೋಡೆಗಳನ್ನಲ್ಲ: ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ </a></p>.<p>ದೆಹಲಿ ಗಡಿ ಪ್ರದೇಶಗಳಲ್ಲಿ ರೈತರ ಪ್ರತಿಭಟನೆಯನ್ನು ತಡೆಯಲು ಕಾಂಕ್ರೀಟ್, ಕಬ್ಬಿಣದ ಸರಳು ಹಾಗೂ ಮೊಳೆಗಳನ್ನು ಸ್ಥಾಪಿಸಲಾಗಿತ್ತು. ಇದನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್, ಸೇತುವೆಗಳನ್ನು ನಿರ್ಮಿಸಿ, ಗೋಡೆಗಳನ್ನಲ್ಲ ಎಂದು ಹೇಳಿಕೆ ನೀಡಿದ್ದರು.</p>.<p>ಈ ಮೊದಲು ಕೇಂದ್ರ ಬಜೆಟ್ 2021 ಬಗ್ಗೆಯೂ ಟೀಕೆ ಮಾಡಿದ್ದ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರವು, ದೇಶದ ಸಂಪತ್ತನ್ನು ಬಂಡವಾಳಶಾಹಿ ಉದ್ಯಮ ಗೆಳೆಯರಿಗೆ ಹಸ್ತಾಂತರಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>