<p><strong>ನವದೆಹಲಿ:</strong> ದ್ವೇಷ, ಹಿಂಸೆ ಮತ್ತು ಬಹಿಷ್ಕಾರಗಳು ನಮ್ಮ ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಹಿಂದೂ –ಮುಸ್ಲಿಂ ಸಂಘರ್ಷ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಸಹೋದರತ್ವ, ಶಾಂತಿ ಮತ್ತು ಸೌಹಾರ್ದತೆ ದೇಶದ ಪ್ರಗತಿಯ ಹಾದಿಯನ್ನು ಸುಗಮಗೊಳಿಸಿವೆ. ನ್ಯಾಯಯುತವಾದ, ಅಂತರ್ಗತ ಭಾರತವನ್ನು ಭದ್ರಪಡಿಸಿಕೊಳ್ಳಲು ಒಟ್ಟಾಗಿ ನಿಲ್ಲೋಣ’ ಎಂದು ಕರೆ ನೀಡಿದ್ದಾರೆ.</p>.<p>ಜಾರ್ಖಂಡ್, ಮಧ್ಯಪ್ರದೇಶ, ಗುಜರಾತ್ನ ಕೆಲವೆಡೆ ಭಾನುವಾರ ನಡೆದ ರಾಮ ನವಮಿ ಉತ್ಸವದ ವೇಳೆ ಹಿಂಸಾಚಾರಗಳು ನಡೆದಿದ್ದವು.</p>.<p><strong>ಓದಿ...<a href="https://www.prajavani.net/business/commerce-news/petrol-and-diesel-prices-today-no-hike-in-fuel-rates-for-sixth-straight-day-927672.html" target="_blank">ಸತತ ಆರನೇ ದಿನ ಪೆಟ್ರೋಲ್, ಡೀಸೆಲ್ ದರ ತಟಸ್ಥ: ಎಲ್ಲೆಲ್ಲಿ ಎಷ್ಟು?</a></strong></p>.<p>ಜಾರ್ಖಂಡ್ನ ಲೋಹಾರ್ದಾಗಾದಲ್ಲಿ ನಡೆದ ಗಲಭೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು 12 ಜನರು ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಗಲಭೆ ಸಂಬಂಧ 77 ಜನರನ್ನು ಬಂಧಿಸಲಾಗಿದೆ. ಘಟನೆಯಲ್ಲಿ 24 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಗುಜರಾತ್ನ ಆನಂದ್ ಜಿಲ್ಲೆಯ ಖಂಬತ್ ಪ್ರದೇಶದಲ್ಲಿ ರಾಮ ನವಮಿ ವೇಳೆ ನಡೆದ ಹಿಂಸಾಚಾರ ಮತ್ತು ಕಲ್ಲು ತೂರಾಟ ಸಂಬಂಧ ಒಂಬತ್ತು ಜನರನ್ನು ಬಂಧಿಸಲಾಗಿದೆ. ಇಲ್ಲಿ ಭಾನುವಾರ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದರು.</p>.<p>ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಸೆಂಧ್ವ ಪಟ್ಟಣದಲ್ಲಿ ರಾಮನ ಉತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಠಾಣಾ ಉಸ್ತುವಾರಿ ಮತ್ತು ಇತರ ಐದು ಜನರು ಗಾಯಗೊಂಡಿದ್ದರು.</p>.<p><strong style="font-family: sans-serif, Arial, Verdana, "Trebuchet MS";">ಓದಿ... <a href="https://www.prajavani.net/india-news/india-reports-796-fresh-covid-19-cases-and-19-deaths-in-the-last-24-hours-927677.html" target="_blank">India Covid-19 Updates: 796 ಹೊಸ ಕೋವಿಡ್ ಪ್ರಕರಣ, 19 ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದ್ವೇಷ, ಹಿಂಸೆ ಮತ್ತು ಬಹಿಷ್ಕಾರಗಳು ನಮ್ಮ ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಹಿಂದೂ –ಮುಸ್ಲಿಂ ಸಂಘರ್ಷ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಸಹೋದರತ್ವ, ಶಾಂತಿ ಮತ್ತು ಸೌಹಾರ್ದತೆ ದೇಶದ ಪ್ರಗತಿಯ ಹಾದಿಯನ್ನು ಸುಗಮಗೊಳಿಸಿವೆ. ನ್ಯಾಯಯುತವಾದ, ಅಂತರ್ಗತ ಭಾರತವನ್ನು ಭದ್ರಪಡಿಸಿಕೊಳ್ಳಲು ಒಟ್ಟಾಗಿ ನಿಲ್ಲೋಣ’ ಎಂದು ಕರೆ ನೀಡಿದ್ದಾರೆ.</p>.<p>ಜಾರ್ಖಂಡ್, ಮಧ್ಯಪ್ರದೇಶ, ಗುಜರಾತ್ನ ಕೆಲವೆಡೆ ಭಾನುವಾರ ನಡೆದ ರಾಮ ನವಮಿ ಉತ್ಸವದ ವೇಳೆ ಹಿಂಸಾಚಾರಗಳು ನಡೆದಿದ್ದವು.</p>.<p><strong>ಓದಿ...<a href="https://www.prajavani.net/business/commerce-news/petrol-and-diesel-prices-today-no-hike-in-fuel-rates-for-sixth-straight-day-927672.html" target="_blank">ಸತತ ಆರನೇ ದಿನ ಪೆಟ್ರೋಲ್, ಡೀಸೆಲ್ ದರ ತಟಸ್ಥ: ಎಲ್ಲೆಲ್ಲಿ ಎಷ್ಟು?</a></strong></p>.<p>ಜಾರ್ಖಂಡ್ನ ಲೋಹಾರ್ದಾಗಾದಲ್ಲಿ ನಡೆದ ಗಲಭೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು 12 ಜನರು ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಗಲಭೆ ಸಂಬಂಧ 77 ಜನರನ್ನು ಬಂಧಿಸಲಾಗಿದೆ. ಘಟನೆಯಲ್ಲಿ 24 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಗುಜರಾತ್ನ ಆನಂದ್ ಜಿಲ್ಲೆಯ ಖಂಬತ್ ಪ್ರದೇಶದಲ್ಲಿ ರಾಮ ನವಮಿ ವೇಳೆ ನಡೆದ ಹಿಂಸಾಚಾರ ಮತ್ತು ಕಲ್ಲು ತೂರಾಟ ಸಂಬಂಧ ಒಂಬತ್ತು ಜನರನ್ನು ಬಂಧಿಸಲಾಗಿದೆ. ಇಲ್ಲಿ ಭಾನುವಾರ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದರು.</p>.<p>ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಸೆಂಧ್ವ ಪಟ್ಟಣದಲ್ಲಿ ರಾಮನ ಉತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಠಾಣಾ ಉಸ್ತುವಾರಿ ಮತ್ತು ಇತರ ಐದು ಜನರು ಗಾಯಗೊಂಡಿದ್ದರು.</p>.<p><strong style="font-family: sans-serif, Arial, Verdana, "Trebuchet MS";">ಓದಿ... <a href="https://www.prajavani.net/india-news/india-reports-796-fresh-covid-19-cases-and-19-deaths-in-the-last-24-hours-927677.html" target="_blank">India Covid-19 Updates: 796 ಹೊಸ ಕೋವಿಡ್ ಪ್ರಕರಣ, 19 ಸಾವು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>