‘ಭಾರತೀಯ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಹಿಂಸೆ, ಅದಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಅವರ ಪೋಷಕರು ನೋಡಬೇಕಾದ ಸ್ಥಿತಿ ಬಂದಿರುವುದನ್ನು ನೋಡಿ ತುಂಬಾ ನೋವಾಗಿದೆ. ಯಾವ ಪೋಷಕರಿಗೂ ಇಂಥ ಸ್ಥಿತಿ ಬರಬಾರದು. ಸ್ಥಳಾಂತರ ಯೋಜನೆಯ ವಿಸ್ತೃತ ಮಾಹಿತಿಯನ್ನು ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಜತೆ ಹಂಚಿಕೊಳ್ಳಬೇಕು. ನಾವು ನಮ್ಮದೇ ಜನರನ್ನು ಕೈಬಿಡಲಾಗದು’ ಎಂದು ಟ್ವೀಟ್ನಲ್ಲಿ ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.