ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟ ನೋಡಿ ನೋವಾಗಿದೆ: ರಾಹುಲ್ ಗಾಂಧಿ

ನವದೆಹಲಿ: ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟ ನೋಡಿ ತುಂಬಾ ನೋವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಉಕ್ರೇನ್ನ ಪೋಲೆಂಡ್ ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಅಲ್ಲಿನ ಯೋಧರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೊ ತುಣುಕನ್ನು ಹಂಚಿಕೊಂಡಿರುವ ಅವರು, ಬೇಸರ ವ್ಯಕ್ತಪಡಿಸಿದ್ದಾರೆ.
‘ಭಾರತೀಯ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಹಿಂಸೆ, ಅದಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಅವರ ಪೋಷಕರು ನೋಡಬೇಕಾದ ಸ್ಥಿತಿ ಬಂದಿರುವುದನ್ನು ನೋಡಿ ತುಂಬಾ ನೋವಾಗಿದೆ. ಯಾವ ಪೋಷಕರಿಗೂ ಇಂಥ ಸ್ಥಿತಿ ಬರಬಾರದು. ಸ್ಥಳಾಂತರ ಯೋಜನೆಯ ವಿಸ್ತೃತ ಮಾಹಿತಿಯನ್ನು ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಜತೆ ಹಂಚಿಕೊಳ್ಳಬೇಕು. ನಾವು ನಮ್ಮದೇ ಜನರನ್ನು ಕೈಬಿಡಲಾಗದು’ ಎಂದು ಟ್ವೀಟ್ನಲ್ಲಿ ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಪೋಲೆಂಡ್ ಗಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಥಳಿಸಿದ ಉಕ್ರೇನ್ ಯೋಧರು
My heart goes out to the Indian students suffering such violence and their family watching these videos. No parent should go through this.
GOI must urgently share the detailed evacuation plan with those stranded as well as their families.
We can’t abandon our own people. pic.twitter.com/MVzOPWIm8D
— Rahul Gandhi (@RahulGandhi) February 28, 2022
ಇದನ್ನೂ ಓದಿ: ಕಣ್ಣೆದುರೇ ಸಾವಿನ ಭೀಕರತೆ ಕಂಡೆ: ಉಕ್ರೇನ್ನಿಂದ ರಾಜ್ಯದ ವಿದ್ಯಾರ್ಥಿನಿ ಭಯದ ಮಾತು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.