‘ಇಂದು ನಾವು ಎರಡು ದೊಡ್ಡ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಅವುಗಳೆಂದರೆ, ಭ್ರಷ್ಟಾಚಾರ, ಪರಿವಾರವಾದ ಅಥವಾ ಸ್ವಜನಪಕ್ಷಪಾತ. ಭ್ರಷ್ಟಾಚಾರ ದೇಶವನ್ನು ಗೆದ್ದಲಿನಂತೆ ಟೊಳ್ಳು ಮಾಡುತ್ತಿದೆ. ನಾವು ಅದರ ವಿರುದ್ಧ ಹೋರಾಡಬೇಕಾಗಿದೆ. ಈ ಹೋರಾಟದಲ್ಲಿ ನಾನು ಎಲ್ಲಾ ಭಾರತೀಯರ ಬೆಂಬಲವನ್ನು ಕೋರುತ್ತೇನೆ. ನಮ್ಮ ಸಂಸ್ಥೆಗಳ ಶಕ್ತಿಯನ್ನು ಅರಿತುಕೊಳ್ಳಲು, ಅರ್ಹತೆಯ ಆಧಾರದ ಮೇಲೆ ದೇಶವನ್ನು ಮುನ್ನಡೆಸಲು 'ಪರಿವಾರವಾದ'ದ ವಿರುದ್ಧ ನಾವು ಜಾಗೃತಿ ಮೂಡಿಸಬೇಕಿದೆ ಎಂದು ಮೋದಿ ಹೇಳಿದ್ದರು.