ಕೋವಿಡ್ ನಿರ್ವಹಣೆಯಲ್ಲಿ ಏನು ತಪ್ಪಾಗಿದೆ ಎಂಬುದರ ಕುರಿತು ಸರ್ಕಾರಕ್ಕೆ ಮಾಹಿತಿ ಮತ್ತು ಒಳನೋಟಗಳನ್ನು ಒದಗಿಸುವುದು ನಮ್ಮ ಉದ್ದೇಶ ಎಂದು ಹೇಳಿದ ರಾಹುಲ್, 'ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವುದಷ್ಟೇ ನಮ್ಮ ಉದ್ದೇಶವಲ್ಲ. ಹಿಂದೆ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು, ಮೂರನೇ ಅಲೆ ಎದುರಿಸಲು ಸಿದ್ಧವಾಗಲು ಸಹಾಯ ಮಾಡುವುದು ಈ ಶ್ವೇತಪತ್ರದ ಉದ್ದೇಶವಾಗಿದೆ‘ ಎಂದು ಹೇಳಿದರು.