<p><strong>ಬೆಂಗಳೂರು:</strong> ವಿಜಯದಶಮಿ ಭಾಷಣದಲ್ಲಿ ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಸ್ತಾಪಿಸಿದ 'ಚೀನಾ ಅತಿಕ್ರಮಣ' ವಿಚಾರಕ್ಕೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.</p>.<p>'ಭಾಗವತ್ ಅವರಿಗೆನಿಜ ಏನು ಅಂತ ಗೊತ್ತು. ಆದರೆ ಅದನ್ನು ಎದುರಿಸಲು ಅವರಿಗೆ ಹೆದರಿಕೆ. ನಿಜ ಅಂದ್ರೆ, ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸಿದೆ. ಭಾರತ ಸರ್ಕಾರ ಮತ್ತು ಆರ್ಎಸ್ಎಸ್ ಅದಕ್ಕೆ ಅವಕಾಶ ಮಾಡಿಕೊಟ್ಟಿದೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ಚೀನಾ ಅತಿಕ್ರಮಣದ ನಂತರಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರತದ ನೆಲವನ್ನು ಚೀನಾ ಅತಿಕ್ರಮಿಸಿಲ್ಲ ಎಂದು ಹೇಳಿಕೆ ನೀಡಿದ್ದರು. ಆಗಲೂ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, 'ನೀವು ಚೀನಾಕ್ಕೆ ಅನುಕೂಲ ಮಾಡಿಕೊಡುತ್ತಿದ್ದೀರಿ' ಎಂದು ಟೀಕಿಸಿತ್ತು.</p>.<p>ಕಳೆದ ಕೆಲ ತಿಂಗಳುಗಳಿಂದ ಈ ವಿಚಾರವನ್ನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಿಯಮಿತವಾಗಿ ಪ್ರಸ್ತಾಪಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಚೀನಾ ಗಡಿಯಲ್ಲಿ ನಿಜವಾಗಿ ಏನಾಗುತ್ತಿದೆ ಎಂಬುದನ್ನು ದೇಶದ ಜನರಿಗೆ ತಿಳಿಸಿ ಎಂದು ರಾಹುಲ್ ಆಗ್ರಹಿಸಿದ್ದರು.</p>.<p>'ಚೀನಾ ನಮ್ಮ ನೆಲವನ್ನು ಅತಿಕ್ರಮಿಸಿದೆ. ಅದನ್ನು ಮತ್ತೆ ತನ್ನ ವಶಕ್ಕೆ ಪಡೆದುಕೊಳ್ಳಲು ಭಾರತ ಸರ್ಕಾರ ಏನು ಯೋಜನೆ ರೂಪಿಸಿದೆ? ಅಥವಾ ಇದನ್ನೂ ನಮ್ಮ ಸರ್ಕಾರ ದೇವರ ಕಾರ್ಯ ಎಂದುಕೊಂಡು ಸುಮ್ಮನಾಗುತ್ತದೆಯೇ? ಎಂದು ರಾಹುಲ್ ಈ ಹಿಂದೆ ಟ್ವೀಟ್ ಮಾಡಿ ಪ್ರಶ್ನಿಸಿದ್ದರು.</p>.<p>'ನಮ್ಮ ಸೇನೆಯು ಗಡಿಯಲ್ಲಿ ಮತ್ತೊಂದು ದೇಶದ ಸೇನೆಗೆ ಮುಖಾಮುಖಿ ನಿಂತಿರುವಾಗ ನಮ್ಮ ನೆಲದ ಮೇಲೆ ಅತಿಕ್ರಮಣ ನಡೆದಿಲ್ಲ ಎಂದು ಹೇಗೆ ಹೇಳುವುದು. ಇಂಥ ವಿಚಾರಗಳನ್ನು ನಾವು ಪ್ರಬಲವಾಗಿ ಪ್ರಸ್ತಾಪಿಸಬೇಕಿದೆ' ಎಂದು ರಾಹುಲ್ ಗಾಂಧಿ ಮತ್ತೊಂದು ಸಂದರ್ಭದಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಜಯದಶಮಿ ಭಾಷಣದಲ್ಲಿ ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಸ್ತಾಪಿಸಿದ 'ಚೀನಾ ಅತಿಕ್ರಮಣ' ವಿಚಾರಕ್ಕೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.</p>.<p>'ಭಾಗವತ್ ಅವರಿಗೆನಿಜ ಏನು ಅಂತ ಗೊತ್ತು. ಆದರೆ ಅದನ್ನು ಎದುರಿಸಲು ಅವರಿಗೆ ಹೆದರಿಕೆ. ನಿಜ ಅಂದ್ರೆ, ಚೀನಾ ನಮ್ಮ ಭೂಮಿಯನ್ನು ಅತಿಕ್ರಮಿಸಿದೆ. ಭಾರತ ಸರ್ಕಾರ ಮತ್ತು ಆರ್ಎಸ್ಎಸ್ ಅದಕ್ಕೆ ಅವಕಾಶ ಮಾಡಿಕೊಟ್ಟಿದೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ಚೀನಾ ಅತಿಕ್ರಮಣದ ನಂತರಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರತದ ನೆಲವನ್ನು ಚೀನಾ ಅತಿಕ್ರಮಿಸಿಲ್ಲ ಎಂದು ಹೇಳಿಕೆ ನೀಡಿದ್ದರು. ಆಗಲೂ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, 'ನೀವು ಚೀನಾಕ್ಕೆ ಅನುಕೂಲ ಮಾಡಿಕೊಡುತ್ತಿದ್ದೀರಿ' ಎಂದು ಟೀಕಿಸಿತ್ತು.</p>.<p>ಕಳೆದ ಕೆಲ ತಿಂಗಳುಗಳಿಂದ ಈ ವಿಚಾರವನ್ನು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಿಯಮಿತವಾಗಿ ಪ್ರಸ್ತಾಪಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ವಿರುದ್ಧ ಟೀಕಾಸ್ತ್ರಗಳನ್ನು ಪ್ರಯೋಗಿಸುತ್ತಿದೆ. ಚೀನಾ ಗಡಿಯಲ್ಲಿ ನಿಜವಾಗಿ ಏನಾಗುತ್ತಿದೆ ಎಂಬುದನ್ನು ದೇಶದ ಜನರಿಗೆ ತಿಳಿಸಿ ಎಂದು ರಾಹುಲ್ ಆಗ್ರಹಿಸಿದ್ದರು.</p>.<p>'ಚೀನಾ ನಮ್ಮ ನೆಲವನ್ನು ಅತಿಕ್ರಮಿಸಿದೆ. ಅದನ್ನು ಮತ್ತೆ ತನ್ನ ವಶಕ್ಕೆ ಪಡೆದುಕೊಳ್ಳಲು ಭಾರತ ಸರ್ಕಾರ ಏನು ಯೋಜನೆ ರೂಪಿಸಿದೆ? ಅಥವಾ ಇದನ್ನೂ ನಮ್ಮ ಸರ್ಕಾರ ದೇವರ ಕಾರ್ಯ ಎಂದುಕೊಂಡು ಸುಮ್ಮನಾಗುತ್ತದೆಯೇ? ಎಂದು ರಾಹುಲ್ ಈ ಹಿಂದೆ ಟ್ವೀಟ್ ಮಾಡಿ ಪ್ರಶ್ನಿಸಿದ್ದರು.</p>.<p>'ನಮ್ಮ ಸೇನೆಯು ಗಡಿಯಲ್ಲಿ ಮತ್ತೊಂದು ದೇಶದ ಸೇನೆಗೆ ಮುಖಾಮುಖಿ ನಿಂತಿರುವಾಗ ನಮ್ಮ ನೆಲದ ಮೇಲೆ ಅತಿಕ್ರಮಣ ನಡೆದಿಲ್ಲ ಎಂದು ಹೇಗೆ ಹೇಳುವುದು. ಇಂಥ ವಿಚಾರಗಳನ್ನು ನಾವು ಪ್ರಬಲವಾಗಿ ಪ್ರಸ್ತಾಪಿಸಬೇಕಿದೆ' ಎಂದು ರಾಹುಲ್ ಗಾಂಧಿ ಮತ್ತೊಂದು ಸಂದರ್ಭದಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>