ಕೊಚ್ಚಿ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಮಾಜ ಸುಧಾರಕ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ, ತಮ್ಮ ಪಕ್ಷದ ‘ಭಾರತ್ ಜೋಡೊ ಯಾತ್ರೆ’ಯನ್ನು ಬುಧವಾರ ಮಾದವನದಿಂದ ಪುನರಾರಂಭಿಸಿದರು. ರಾಹುಲ್ ಅವರಿಗೆ 14ನೇ ದಿನದ ಪಾದಯಾತ್ರೆಯಲ್ಲಿ ಪಕ್ಷದ ಹಿರಿಯ ನಾಯಕ ಸಚಿನ್ ಪೈಲಟ್,ವಯನಾಡು ಸಂಸದರು, ಪಕ್ಷದ ರಾಜ್ಯ ಘಟಕದ ಹಿರಿಯ ನಾಯಕರು ಸಾಥ್ ನೀಡಿದರು.