ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷವು ಜನರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸದಾ ಮುಕ್ತ ಅವಕಾಶ ನೀಡಿದೆ. ದೇಶದ ಬೇರೆ ಯಾವ ರಾಜಕೀಯ ಪಕ್ಷ ಸಂವಾದಕ್ಕೆ ಅವಕಾಶ ನೀಡಿದೆ? ಬಿಜೆಪಿ ಮತ್ತು ಆರ್ಎಸ್ಎಸ್ ಖಂಡಿತವಾಗಿಯೂ ಅವಕಾಶ ನೀಡುವುದಿಲ್ಲ. ಭಾರತವು ರಾಜ್ಯಗಳ ಒಕ್ಕೂಟ. ಈ ಒಕ್ಕೂಟವನ್ನು ರಚಿಸಲು ಜನರು ಒಂದಾಗಿದ್ದಾರೆ’ ಎಂದು ಹೇಳಿದ್ದಾರೆ.