ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಕ್ಕೆ ಪ್ರಜಾಪ್ರಭುತ್ವದಿಂದ ಮುಕ್ತಿ ಬೇಕಾಗಿದೆ: ರಾಹುಲ್‌ ಗಾಂಧಿ

Last Updated 9 ಡಿಸೆಂಬರ್ 2020, 11:25 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರವು ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಬಯಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ.

‘ನಮ್ಮಲ್ಲಿ ಪ್ರಜಾಪ್ರಭುತ್ವ ತುಂಬಾ ಇದೆ. ಹಾಗಾಗಿ ಭಾರತದಲ್ಲಿ ಸುಧಾರಣೆ ತರಲು ಬಹಳ ಕಷ್ಟವಿದೆ. ಗಣಿಗಾರಿಕೆ, ಕೃಷಿ, ಕಲ್ಲಿದ್ದಲ್ಲು ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತರಲು ರಾಜಕೀಯ ಇ‌ಚ್ಛಾಶಕ್ತಿ ಕೂಡ ಬೇಕು’ ಎಂದು ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್‌ ಅವರು ಮಂಗಳವಾರ ನಡೆದ ವರ್ಚುವಲ್‌ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು,‘ ಪ್ರಧಾನಿ ಮೋದಿ ಅವರ ಆಡಳಿತ ಸುಧಾರಣೆಯು ಕಳ್ಳತನಕ್ಕೆ ಸಮಾನವಾಗಿದೆ. ಹಾಗಾಗಿ ಅವರು ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಬಯಸುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT