‘ರೈತರಿಗೆ ನೀಡಿದ ಭರವಸೆಯನ್ನು ನಾವು ಪೂರೈಸಿದ್ದೇವೆ. ಕೇಂದ್ರ ಸರ್ಕಾರ ಬೇರೆಯದೇ ಹಾದಿಯಲ್ಲಿ ಸಾಗುತ್ತಿದೆ ಎಂಬುದು ನಿಮಗೆ ತಿಳಿದಿದೆ. ರೈತರ ವಿರುದ್ಧ ಕೃಷಿ ಕಾಯ್ದೆಗಳನ್ನು ಸರ್ಕಾರ ಜಾರಿಗೊಳಿಸಿದೆ. ರೈತರ ಆದಾಯ ಮತ್ತು ಭವಿಷ್ಯವನ್ನು ಕಸಿದುಕೊಂಡು ಅದನ್ನು ಎರಡು-ಮೂರು ದೊಡ್ಡ ಉದ್ಯಮಿಗಳಿಗೆ ಹಸ್ತಾಂತರಿಸಲು ಬಯಸಿದೆ’ ಎಂದು ಅವರು ಸರ್ಕಾರದ ವಿರುದ್ಧ ಹರಿಹಾಯ್ದರು.