ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಭವಿಷ್ಯ ಕಸಿಯುವ ಯತ್ನ: ರಾಹುಲ್‌ ಗಾಂಧಿ

Last Updated 21 ಮಾರ್ಚ್ 2021, 15:46 IST
ಅಕ್ಷರ ಗಾತ್ರ

ರಾಯಪುರ: ‘ದೇಶದ ಕೆಲವು ಪ್ರಖ್ಯಾತ ಉದ್ಯಮಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಆದಾಯ ಮತ್ತು ಭವಿಷ್ಯವನ್ನು ಕಸಿದುಕೊಳ್ಳಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಭಾನುವಾರ ಹೇಳಿದರು.

ರಾಜ್ಯ ಸರ್ಕಾರದ ಎರಡು ಯೋಜನೆಗಳ ಅಡಿಯಲ್ಲಿ ಜಾನುವಾರು ಸಾಕಣೆದಾರರು ಮತ್ತು ರೈತರಿಗೆ ನಗದು ವಿತರಿಸುವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ರೈತರಿಗೆ ನೀಡಿದ ಭರವಸೆಯನ್ನು ನಾವು ಪೂರೈಸಿದ್ದೇವೆ. ಕೇಂದ್ರ ಸರ್ಕಾರ ಬೇರೆಯದೇ ಹಾದಿಯಲ್ಲಿ ಸಾಗುತ್ತಿದೆ ಎಂಬುದು ನಿಮಗೆ ತಿಳಿದಿದೆ. ರೈತರ ವಿರುದ್ಧ ಕೃಷಿ ಕಾಯ್ದೆಗಳನ್ನು ಸರ್ಕಾರ ಜಾರಿಗೊಳಿಸಿದೆ. ರೈತರ ಆದಾಯ ಮತ್ತು ಭವಿಷ್ಯವನ್ನು ಕಸಿದುಕೊಂಡು ಅದನ್ನು ಎರಡು-ಮೂರು ದೊಡ್ಡ ಉದ್ಯಮಿಗಳಿಗೆ ಹಸ್ತಾಂತರಿಸಲು ಬಯಸಿದೆ’ ಎಂದು ಅವರು ಸರ್ಕಾರದ ವಿರುದ್ಧ ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT