<p class="title"><strong>ನವದೆಹಲಿ:</strong> ‘ಕೇಂದ್ರ ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯದೇ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ದೃಢ ನಿರ್ಧಾರ ತಳೆಯುವ ರಾಹುಲ್ ಗಾಂಧಿ ಮಾತ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ಸಮರ್ಥರು’ ಎಂದು ಛತ್ತೀಸಗಡದ ಮುಖ್ಯಮಂತ್ರಿ ಭೂಪೇಷ್ ಬಘೆಲ್ ಅವರು ಪ್ರತಿಪಾದಿಸಿದ್ದಾರೆ.</p>.<p class="title">ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಮುಖ್ಯಮಂತ್ರಿ ಅವರು ಪಕ್ಷದ ರಾಜ್ಯ ಘಟಕದ ಸಭೆಯಲ್ಲಿ ಮಂಡಿಸಿದ್ದು, ಸಭೆ ಅನುಮೋದಿಸಿದೆ. ಈ ಮೂಲಕ ದೆಹಲಿ ನಂತರ ಒಂದು ವಾರದ ಅಂತರದಲ್ಲಿ ನಿರ್ಣಯ ಅಂಗೀಕರಿಸಿದ ಎರಡನೇ ರಾಜ್ಯ ಛತ್ತೀಸಗಡ ಆಗಿದೆ.</p>.<p>ಪಕ್ಷದ ಎಲ್ಲ ನಾಯಕರು ರಾಹುಲ್ ನಾಯಕತ್ವದಲ್ಲಿ ಪಕ್ಷ ಬಲಗೊಳ್ಳುವ ವಿಶ್ವಾಸವನ್ನು ಹೊಂದಿದ್ದಾರೆ. ಪಕ್ಷದ ಅಡಿಪಾಯವು ಅವರ ನಾಯಕತ್ವದಲ್ಲಿ ಇನ್ನಷ್ಟು ದೃಢವಾಗಲಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ರಾಹುಲ್ ಗಾಂಧಿ ಆ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯೇ ಎಂಬ ಪ್ರಶ್ನೆಗೆ ‘ಅವರಲ್ಲದೆ ಮತ್ಯಾರು? ರಾಹುಲ್ ಹೊರತುಪಡಿಸಿ ಬೇರೆ ನಾಯಕರು ರಾಷ್ಟ್ರದಾದ್ಯಂತ ಪ್ರವಾಸ ಮಾಡಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/foreign-minister-jaishankar-toolkit-climate-activist-greta-thunberg-delhi-farmers-protest-802990.html" itemprop="url">'ಟೂಲ್ ಕಿಟ್' ತನಿಖೆಯಿಂದ ಬಹಳಷ್ಟು ವಿಚಾರಗಳು ಹೊರಬರಲಿವೆ: ವಿದೇಶಾಂಗ ಸಚಿವ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ‘ಕೇಂದ್ರ ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯದೇ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ದೃಢ ನಿರ್ಧಾರ ತಳೆಯುವ ರಾಹುಲ್ ಗಾಂಧಿ ಮಾತ್ರವೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ಸಮರ್ಥರು’ ಎಂದು ಛತ್ತೀಸಗಡದ ಮುಖ್ಯಮಂತ್ರಿ ಭೂಪೇಷ್ ಬಘೆಲ್ ಅವರು ಪ್ರತಿಪಾದಿಸಿದ್ದಾರೆ.</p>.<p class="title">ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಮುಖ್ಯಮಂತ್ರಿ ಅವರು ಪಕ್ಷದ ರಾಜ್ಯ ಘಟಕದ ಸಭೆಯಲ್ಲಿ ಮಂಡಿಸಿದ್ದು, ಸಭೆ ಅನುಮೋದಿಸಿದೆ. ಈ ಮೂಲಕ ದೆಹಲಿ ನಂತರ ಒಂದು ವಾರದ ಅಂತರದಲ್ಲಿ ನಿರ್ಣಯ ಅಂಗೀಕರಿಸಿದ ಎರಡನೇ ರಾಜ್ಯ ಛತ್ತೀಸಗಡ ಆಗಿದೆ.</p>.<p>ಪಕ್ಷದ ಎಲ್ಲ ನಾಯಕರು ರಾಹುಲ್ ನಾಯಕತ್ವದಲ್ಲಿ ಪಕ್ಷ ಬಲಗೊಳ್ಳುವ ವಿಶ್ವಾಸವನ್ನು ಹೊಂದಿದ್ದಾರೆ. ಪಕ್ಷದ ಅಡಿಪಾಯವು ಅವರ ನಾಯಕತ್ವದಲ್ಲಿ ಇನ್ನಷ್ಟು ದೃಢವಾಗಲಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ರಾಹುಲ್ ಗಾಂಧಿ ಆ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯೇ ಎಂಬ ಪ್ರಶ್ನೆಗೆ ‘ಅವರಲ್ಲದೆ ಮತ್ಯಾರು? ರಾಹುಲ್ ಹೊರತುಪಡಿಸಿ ಬೇರೆ ನಾಯಕರು ರಾಷ್ಟ್ರದಾದ್ಯಂತ ಪ್ರವಾಸ ಮಾಡಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/foreign-minister-jaishankar-toolkit-climate-activist-greta-thunberg-delhi-farmers-protest-802990.html" itemprop="url">'ಟೂಲ್ ಕಿಟ್' ತನಿಖೆಯಿಂದ ಬಹಳಷ್ಟು ವಿಚಾರಗಳು ಹೊರಬರಲಿವೆ: ವಿದೇಶಾಂಗ ಸಚಿವ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>