ನವದೆಹಲಿ: ಕೋವಿಡ್ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಸತ್ತ ವ್ಯಕ್ತಿಯ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ಸರ್ಕಾರ ನೀಡುವ ಪರಿಹಾರ, ಆ ಕುಟುಂಬಕ್ಕೆ ಸಣ್ಣದಾದ ನೆರವು ನೀಡುತ್ತದೆ‘ ಎಂದು ಹೇಳಿದ್ದಾರೆ.