<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ಕೃಷಿ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.</p>.<p>ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/farmers-national-convention-to-mark-9-months-of-protest-begins-at-singhu-border-861112.html" itemprop="url">ರೈತ ಹೋರಾಟಕ್ಕೆ 9 ತಿಂಗಳು; ಸಿಂಘು ಗಡಿಯಲ್ಲಿ ಎರಡು ದಿನಗಳ ರೈತ ಸಮಾವೇಶ </a></p>.<p>ಈ ನಡುವೆ ರೈತರ ಪರ ಮಗದೊಮ್ಮೆ ಧ್ವನಿ ಎತ್ತಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಬಂಡವಾಳಶಾಹಿಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.</p>.<p>'ಹೊಲಗಳು ಮರಳು ಆಗಲು ಬಿಡುವುದಿಲ್ಲ, ಅದನ್ನು ಅವರ (ಬಿಜೆಪಿ) ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ' ಎಂದು ಟ್ವೀಟ್ ಮಾಡಿದ್ದಾರೆ.</p>.<p>ಕೇಂದ್ರ ಸರ್ಕಾರವು ಕೃಷಿ ಭೂಮಿಯನ್ನು ತಮ್ಮ ಸ್ನೇಹಿತರಿಗೆ ಹಸ್ತಾಂತರಿಸುವ ಹುನ್ನಾರವನ್ನು ಹೊಂದಿದೆ. ಕೃಷಿ ವ್ಯವಸ್ಥೆಯನ್ನು ನಾಶಗೊಳಿಸಲು ನೂತನ ಕಾನೂನು ರಚಿಸಲಾಗಿದೆ ಎಂದು ರಾಹುಲ್ ಗಾಂಧಿ ಈ ಹಿಂದೆಯೇ ವಾಗ್ದಾಳಿ ನಡೆಸಿದ್ದರು.</p>.<p>ಕಳೆದ ವರ್ಷ ನವೆಂಬರ್ 26ರಂದು ದೆಹಲಿ ಸಿಂಘು ಗಡಿಯಲ್ಲಿ ರೈತರು ಆರಂಭಿಸಿರುವ ಹೋರಾಟವು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ಕೃಷಿ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.</p>.<p>ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಒಂಬತ್ತು ತಿಂಗಳು ಪೂರ್ಣಗೊಂಡಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/farmers-national-convention-to-mark-9-months-of-protest-begins-at-singhu-border-861112.html" itemprop="url">ರೈತ ಹೋರಾಟಕ್ಕೆ 9 ತಿಂಗಳು; ಸಿಂಘು ಗಡಿಯಲ್ಲಿ ಎರಡು ದಿನಗಳ ರೈತ ಸಮಾವೇಶ </a></p>.<p>ಈ ನಡುವೆ ರೈತರ ಪರ ಮಗದೊಮ್ಮೆ ಧ್ವನಿ ಎತ್ತಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರವು ಬಂಡವಾಳಶಾಹಿಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.</p>.<p>'ಹೊಲಗಳು ಮರಳು ಆಗಲು ಬಿಡುವುದಿಲ್ಲ, ಅದನ್ನು ಅವರ (ಬಿಜೆಪಿ) ಸ್ನೇಹಿತರಿಗೆ ಉಡುಗೊರೆಯಾಗಿ ನೀಡಲು ಬಿಡುವುದಿಲ್ಲ. ಕೃಷಿ ವಿರೋಧಿ ಕಾನೂನುಗಳನ್ನು ಹಿಂಪಡೆಯಿರಿ' ಎಂದು ಟ್ವೀಟ್ ಮಾಡಿದ್ದಾರೆ.</p>.<p>ಕೇಂದ್ರ ಸರ್ಕಾರವು ಕೃಷಿ ಭೂಮಿಯನ್ನು ತಮ್ಮ ಸ್ನೇಹಿತರಿಗೆ ಹಸ್ತಾಂತರಿಸುವ ಹುನ್ನಾರವನ್ನು ಹೊಂದಿದೆ. ಕೃಷಿ ವ್ಯವಸ್ಥೆಯನ್ನು ನಾಶಗೊಳಿಸಲು ನೂತನ ಕಾನೂನು ರಚಿಸಲಾಗಿದೆ ಎಂದು ರಾಹುಲ್ ಗಾಂಧಿ ಈ ಹಿಂದೆಯೇ ವಾಗ್ದಾಳಿ ನಡೆಸಿದ್ದರು.</p>.<p>ಕಳೆದ ವರ್ಷ ನವೆಂಬರ್ 26ರಂದು ದೆಹಲಿ ಸಿಂಘು ಗಡಿಯಲ್ಲಿ ರೈತರು ಆರಂಭಿಸಿರುವ ಹೋರಾಟವು ಒಂಬತ್ತು ತಿಂಗಳು ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>