ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲದ ದರ ಏರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಮಾಡುತ್ತಿರುವವರು, ತಾವು ಮಾತ್ರ ಸ್ನೇಹಿತರ ನೆರಳಿನಲ್ಲಿ ಮಲಗುತ್ತಿದ್ದಾರೆ‘ ಎಂದು ಟೀಕಿಸಿದ್ದಾರೆ.