ವಿದ್ಯುತ್ ಬಿಕ್ಕಟ್ಟಿಗೆ ನೆಹರೂರನ್ನೇ ದೂಷಿಸುತ್ತೀರಾ: ಮೋದಿಗೆ ರಾಹುಲ್ ಪ್ರಶ್ನೆ

ನವದೆಹಲಿ: ದೇಶದಲ್ಲಿ ತಲೆದೋರಿರುವ ವಿದ್ಯುತ್ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈಗ ದೇಶದಲ್ಲಿ ತಲೆದೋರಿರುವ ವಿದ್ಯುತ್ ಬಿಕ್ಕಟ್ಟಿಗೆ ಯಾರನ್ನು ದೂಷಿಸುತ್ತೀರಿ ಎಂದು ಮೋದಿಯನ್ನು ರಾಹುಲ್ ಪ್ರಶ್ನಿಸಿದ್ದಾರೆ.
ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಅವರು, ‘ಪ್ರಧಾನಿಯವರ ಭರವಸೆಗಳು ಮತ್ತು ಉದ್ದೇಶಗಳೊಂದಿಗೆ ನಾವು ಸಂಪರ್ಕ ಸಾಧಿಸಲು ಸಾಧ್ಯವಿಲ್ಲ. ಮೋದಿಯವರೇ, ಈ ವಿದ್ಯುತ್ ಬಿಕ್ಕಟ್ಟಿಗೆ ನಿಮ್ಮ ವೈಫಲ್ಯವೇ ಕಾರಣ. ಈಗ ನೀವು ಯಾರನ್ನು ದೂಷಿಸುವಿರಿ? ನೆಹರೂ ಅವರನ್ನೇ ಅಥವಾ ರಾಜ್ಯಗಳನ್ನೇ ಅಥವಾ ಜನರನ್ನೇ?’ ಎಂದು ರಾಹುಲ್ ಕೇಳಿದ್ದಾರೆ.
ಪ್ರಧಾನಿ ಮೋದಿ ಈ ಹಿಂದೆ ಮಾಡಿರುವ ಭಾಷಣದ ವಿಡಿಯೊ ತುಣುಕನ್ನು ರಾಹುಲ್ ತಮ್ಮ ಟ್ವೀಟ್ ಜೊತೆಗೆ ಹಂಚಿಕೊಂಡಿದ್ದಾರೆ. 24 ಗಂಟೆಗಳ ಕಾಲ ವಿದ್ಯುತ್ ನೀಡುವುದಾಗಿ ಪ್ರಧಾನಿ ಮೋದಿ ಈ ವಿಡಿಯೊದಲ್ಲಿ ಭರವಸೆ ನೀಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಭೀಕರವಾದ ವಿದ್ಯುತ್ ಬಿಕ್ಕಟ್ಟನ್ನು ಎದುರಿಸುತ್ತಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.