<p><strong>ನವದೆಹಲಿ: </strong>ಕೇಂದ್ರ ಸರ್ಕಾರದಲ್ಲಿ ನೂತನ ಆರೋಗ್ಯ ಸಚಿವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ಏನಾದರೂ ಬದಲಾವಣೆ ಆಗುತ್ತದೆಯೇ? ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.</p>.<p>"#Change" ಎಂಬ ಹ್ಯಾಶ್ಟ್ಯಾಗ್ ಬಳಸಿರುವ ರಾಹುಲ್ ಗಾಂಧಿ, ‘ಇದರರ್ಥ ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲ ಎಂಬುದೇ?’ಎಂದು ಪ್ರಶ್ನಿಸಿದ್ದಾರೆ.</p>.<p>ದೇಶದ ಲಸಿಕಾ ಅಭಿಮಾನವು ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ ಮತ್ತು ಅದಕ್ಕೆ ವೇಗ ನೀಡಬೇಕಿದೆ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸುತ್ತಲೇ ಇದೆ.</p>.<p>ರಾಹುಲ್ ಗಾಂಧಿ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಗೌರವ ಭಾಟಿಯಾ, ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ವ್ಯಕ್ತಿ, ಟೀಕೆ ಮಾಡಬೇಕು ಎಂದು ಮಾಡುತ್ತಾರೆ. ರಚನಾತ್ಮಕ ಟೀಕೆಗಳಿದ್ದರೆ ಖಂಡಿತಾ ಸ್ವೀಕರಿಸುತ್ತೇವೆ ಎಂದಿದ್ದಾರೆ.</p>.<p>ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಅವರನ್ನು ಕೈಬಿಡುವ ಮೂಲಕ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಈ ಹಿಂದೆ ಟೀಕಿಸಿತ್ತು.</p>.<p>ಕೆಲವು ರಾಜ್ಯಗಳು ಲಸಿಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿರುವುದರಿಂದ ಕೊರತೆ ನೀಗಿಸುವುದು ಹೊಸ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಮೊದಲ ಕಾರ್ಯವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರ ಸರ್ಕಾರದಲ್ಲಿ ನೂತನ ಆರೋಗ್ಯ ಸಚಿವರು ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ಏನಾದರೂ ಬದಲಾವಣೆ ಆಗುತ್ತದೆಯೇ? ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.</p>.<p>"#Change" ಎಂಬ ಹ್ಯಾಶ್ಟ್ಯಾಗ್ ಬಳಸಿರುವ ರಾಹುಲ್ ಗಾಂಧಿ, ‘ಇದರರ್ಥ ಇನ್ನು ಮುಂದೆ ಲಸಿಕೆ ಕೊರತೆ ಇರುವುದಿಲ್ಲ ಎಂಬುದೇ?’ಎಂದು ಪ್ರಶ್ನಿಸಿದ್ದಾರೆ.</p>.<p>ದೇಶದ ಲಸಿಕಾ ಅಭಿಮಾನವು ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ ಮತ್ತು ಅದಕ್ಕೆ ವೇಗ ನೀಡಬೇಕಿದೆ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸುತ್ತಲೇ ಇದೆ.</p>.<p>ರಾಹುಲ್ ಗಾಂಧಿ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಗೌರವ ಭಾಟಿಯಾ, ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ವ್ಯಕ್ತಿ, ಟೀಕೆ ಮಾಡಬೇಕು ಎಂದು ಮಾಡುತ್ತಾರೆ. ರಚನಾತ್ಮಕ ಟೀಕೆಗಳಿದ್ದರೆ ಖಂಡಿತಾ ಸ್ವೀಕರಿಸುತ್ತೇವೆ ಎಂದಿದ್ದಾರೆ.</p>.<p>ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಅವರನ್ನು ಕೈಬಿಡುವ ಮೂಲಕ ಕೇಂದ್ರ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಈ ಹಿಂದೆ ಟೀಕಿಸಿತ್ತು.</p>.<p>ಕೆಲವು ರಾಜ್ಯಗಳು ಲಸಿಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿರುವುದರಿಂದ ಕೊರತೆ ನೀಗಿಸುವುದು ಹೊಸ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಮೊದಲ ಕಾರ್ಯವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>