<p><strong>ನವದೆಹಲಿ:</strong> ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ‘ಸ್ಪೀಕ್ ಅಪ್ ಎಗೇನೆಸ್ಟ್ ಪ್ರೈಸ್ ರೈಸ್’ ಎಂಬ ಆನ್ಲೈನ್ ಅಭಿಯಾನವನ್ನು ಕಾಂಗ್ರೆಸ್ ಪಕ್ಷ ಶುಕ್ರವಾರ ಆರಂಭಿಸಿದ್ದು ಎಲ್ಲರೂ ಇದರಲ್ಲಿ ಭಾಗವಹಿಸುವಂತೆ ಟ್ವಿಟರ್ ಮೂಲಕ ಮನವಿ ಮಾಡಿದೆ.</p>.<p>‘ಬಿಜೆಪಿ ಎಂದರೆ ‘ಬರ್ಡನ್ ದ ಜನತಾ ಪಾರ್ಟಿ’ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್, ಬಿಜೆಪಿಯ ಲೂಟಿಯ ಬಗ್ಗೆ ಎಷ್ಟು ಬೇಗ ಧ್ವನಿ ಎತ್ತುತ್ತೇವೋ ಅಷ್ಟು ಬೇಗ ರಾಷ್ಟ್ರಕ್ಕೆ ಅಷ್ಟೇ ಒಳ್ಳೆಯದಾಗುತ್ತದೆ. <strong>#SpeakUpAgainstPriceRise</strong> ಅಭಿಯಾನದಲ್ಲಿ ನೀವೂ ಭಾಗಿಯಾಗಿ’ ಎಂದು ಕಾಂಗ್ರೆಸ್ ಪಕ್ಷ ಜನರಿಗೆ ಮನವಿ ಮಾಡಿದೆ.</p>.<p>‘ಬೆಲೆ ಏರಿಕೆ ಒಂದು ಶಾಪವಾಗಿದೆ. ಕೇಂದ್ರ ಸರ್ಕಾರ ತೆರಿಗೆಯನ್ನು ಸಂಗ್ರಹಿಸಲು ಇಂಧನ ದರ ಏರಿಕೆ ಮಾಡಿದೆ. ಈ ಮೂಲಕ ಜನರನ್ನು ಹಳ್ಳಕ್ಕೆ ತಳ್ಳುತ್ತಿದೆ. ದೇಶದ ವಿನಾಶದ ವಿರುದ್ಧ ನಿಮ್ಮ ಧ್ವನಿ ಎತ್ತಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದ ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಹಿರಿಯ ನಾಯಕ ಶಶಿ ತರೂರ್,‘ಮೋದಿ ಸರ್ಕಾರದ ಪ್ರತಿಯೊಂದು ಕ್ರಮವು ಜನರ ಜೇಬನ್ನು ಖಾಲಿ ಮಾಡುತ್ತಿದೆ ಮತ್ತು ಅವರ ಬೊಕ್ಕಸವನ್ನು ತುಂಬುತ್ತಿದೆ. ಈ ರೀತಿಯ ವರ್ತನೆಯನ್ನು ಭಾರತ ಸಹಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ವಿಡಿಯೊವೊಂದನ್ನು ಶೇರ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ‘ಸ್ಪೀಕ್ ಅಪ್ ಎಗೇನೆಸ್ಟ್ ಪ್ರೈಸ್ ರೈಸ್’ ಎಂಬ ಆನ್ಲೈನ್ ಅಭಿಯಾನವನ್ನು ಕಾಂಗ್ರೆಸ್ ಪಕ್ಷ ಶುಕ್ರವಾರ ಆರಂಭಿಸಿದ್ದು ಎಲ್ಲರೂ ಇದರಲ್ಲಿ ಭಾಗವಹಿಸುವಂತೆ ಟ್ವಿಟರ್ ಮೂಲಕ ಮನವಿ ಮಾಡಿದೆ.</p>.<p>‘ಬಿಜೆಪಿ ಎಂದರೆ ‘ಬರ್ಡನ್ ದ ಜನತಾ ಪಾರ್ಟಿ’ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್, ಬಿಜೆಪಿಯ ಲೂಟಿಯ ಬಗ್ಗೆ ಎಷ್ಟು ಬೇಗ ಧ್ವನಿ ಎತ್ತುತ್ತೇವೋ ಅಷ್ಟು ಬೇಗ ರಾಷ್ಟ್ರಕ್ಕೆ ಅಷ್ಟೇ ಒಳ್ಳೆಯದಾಗುತ್ತದೆ. <strong>#SpeakUpAgainstPriceRise</strong> ಅಭಿಯಾನದಲ್ಲಿ ನೀವೂ ಭಾಗಿಯಾಗಿ’ ಎಂದು ಕಾಂಗ್ರೆಸ್ ಪಕ್ಷ ಜನರಿಗೆ ಮನವಿ ಮಾಡಿದೆ.</p>.<p>‘ಬೆಲೆ ಏರಿಕೆ ಒಂದು ಶಾಪವಾಗಿದೆ. ಕೇಂದ್ರ ಸರ್ಕಾರ ತೆರಿಗೆಯನ್ನು ಸಂಗ್ರಹಿಸಲು ಇಂಧನ ದರ ಏರಿಕೆ ಮಾಡಿದೆ. ಈ ಮೂಲಕ ಜನರನ್ನು ಹಳ್ಳಕ್ಕೆ ತಳ್ಳುತ್ತಿದೆ. ದೇಶದ ವಿನಾಶದ ವಿರುದ್ಧ ನಿಮ್ಮ ಧ್ವನಿ ಎತ್ತಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದ ವಿಡಿಯೊವನ್ನು ಕೂಡ ಹಂಚಿಕೊಂಡಿದ್ದಾರೆ.</p>.<p>ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಹಿರಿಯ ನಾಯಕ ಶಶಿ ತರೂರ್,‘ಮೋದಿ ಸರ್ಕಾರದ ಪ್ರತಿಯೊಂದು ಕ್ರಮವು ಜನರ ಜೇಬನ್ನು ಖಾಲಿ ಮಾಡುತ್ತಿದೆ ಮತ್ತು ಅವರ ಬೊಕ್ಕಸವನ್ನು ತುಂಬುತ್ತಿದೆ. ಈ ರೀತಿಯ ವರ್ತನೆಯನ್ನು ಭಾರತ ಸಹಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ವಿಡಿಯೊವೊಂದನ್ನು ಶೇರ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>