ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ಹಿರಿಯ ನಾಯಕ ಶಶಿ ತರೂರ್,‘ಮೋದಿ ಸರ್ಕಾರದ ಪ್ರತಿಯೊಂದು ಕ್ರಮವು ಜನರ ಜೇಬನ್ನು ಖಾಲಿ ಮಾಡುತ್ತಿದೆ ಮತ್ತು ಅವರ ಬೊಕ್ಕಸವನ್ನು ತುಂಬುತ್ತಿದೆ. ಈ ರೀತಿಯ ವರ್ತನೆಯನ್ನು ಭಾರತ ಸಹಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ವಿಡಿಯೊವೊಂದನ್ನು ಶೇರ್ ಮಾಡಿದ್ದಾರೆ.