<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನ ಮತ್ತು ಇಲ್ಲಿನ ಹಜರತ್ಬಲ್ ಮಸೀದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿ ನೀಡಿದರು.</p>.<p>‘ಜಮ್ಮು–ಕಾಶ್ಮೀರಕ್ಕೆ ಎರಡು ದಿನದ ಪ್ರವಾಸಕ್ಕಾಗಿ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿಗೆ ಆಗಮಿಸಿದ್ದಾರೆ. ಕೇಂದ್ರ ಕಾಶ್ಮೀರದ ಚಿನಾರಸ್ನಲ್ಲಿರುವ ದೇವಸ್ಥಾನಕ್ಕೆ ಮಂಗಳವಾರ ಬೆಳಿಗ್ಗೆ ಅವರು ಭೇಟಿ ನೀಡಿದರು’ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದರು.</p>.<p>ರಾಹುಲ್ ಗಾಂಧಿ ಅವರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಜಮ್ಮು–ಕಾಶ್ಮೀರದ ಎಐಸಿಸಿ ಉಸ್ತುವಾರಿ ರಜನಿ ಪಾಟೀಲ್ ಅವರು ಕೂಡ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿದರು.</p>.<p>‘ಇದು ವೈಯಕ್ತಿಕ ಭೇಟಿಯಾಗಿದ್ದು, ರಾಹುಲ್ ಅವರು ದೇವಸ್ಥಾನದಲ್ಲಿ ಅರ್ಧ ಗಂಟೆವರೆಗೆ ಇದ್ದರು. ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಮೀರ್ ಬಾಬಾ ಹೈದರ್ ಮಸೀದಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು’ ಎಂದು ಅವರು ಮಾಹಿತಿ ನೀಡಿದರು.</p>.<p>ಜಮ್ಮು–ಕಾಶ್ಮೀರದ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಗುಲಾಂ ಅಹಮದ್ ಮಿರ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಸೋಮವಾರ ಸಂಜೆ ಅವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನ ಮತ್ತು ಇಲ್ಲಿನ ಹಜರತ್ಬಲ್ ಮಸೀದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿ ನೀಡಿದರು.</p>.<p>‘ಜಮ್ಮು–ಕಾಶ್ಮೀರಕ್ಕೆ ಎರಡು ದಿನದ ಪ್ರವಾಸಕ್ಕಾಗಿ ರಾಹುಲ್ ಗಾಂಧಿ ಅವರು ಸೋಮವಾರ ಇಲ್ಲಿಗೆ ಆಗಮಿಸಿದ್ದಾರೆ. ಕೇಂದ್ರ ಕಾಶ್ಮೀರದ ಚಿನಾರಸ್ನಲ್ಲಿರುವ ದೇವಸ್ಥಾನಕ್ಕೆ ಮಂಗಳವಾರ ಬೆಳಿಗ್ಗೆ ಅವರು ಭೇಟಿ ನೀಡಿದರು’ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದರು.</p>.<p>ರಾಹುಲ್ ಗಾಂಧಿ ಅವರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಜಮ್ಮು–ಕಾಶ್ಮೀರದ ಎಐಸಿಸಿ ಉಸ್ತುವಾರಿ ರಜನಿ ಪಾಟೀಲ್ ಅವರು ಕೂಡ ಖೀರ್ ಭವಾನಿ ದೇವಸ್ಥಾನಕ್ಕೆ ಭೇಟಿ ನೀಡಿದರು.</p>.<p>‘ಇದು ವೈಯಕ್ತಿಕ ಭೇಟಿಯಾಗಿದ್ದು, ರಾಹುಲ್ ಅವರು ದೇವಸ್ಥಾನದಲ್ಲಿ ಅರ್ಧ ಗಂಟೆವರೆಗೆ ಇದ್ದರು. ದೇವಿಗೆ ಪೂಜೆ ಸಲ್ಲಿಸಿದರು. ಬಳಿಕ ಮೀರ್ ಬಾಬಾ ಹೈದರ್ ಮಸೀದಿಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು’ ಎಂದು ಅವರು ಮಾಹಿತಿ ನೀಡಿದರು.</p>.<p>ಜಮ್ಮು–ಕಾಶ್ಮೀರದ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಗುಲಾಂ ಅಹಮದ್ ಮಿರ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಸೋಮವಾರ ಸಂಜೆ ಅವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>